25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

ಬೆಳ್ತಂಗಡಿ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ತಿರುವಿನಲ್ಲಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಧರ್ಮಸ್ಥಳ ಪೊಲೀಸ್ ಇಲಾಖಾ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಧರ್ಮಸ್ಥಳ ಪೊಲೀಸ್‌ ಠಾಣಾ ಪಿಎಸ್‌ ಐ ರವರು ಮಂಗಳೂರು ನ್ಯಾಯಾಲಯದಲ್ಲಿ ಸಾಕ್ಷಿ ನುಡಿಯಲು ಇಲಾಖಾ ಬೊಲೆರೋ ಜೀಪ್‌ನಲ್ಲಿ ಚಾಲಕ ರೊಂದಿಗೆ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಬೆಳಗ್ಗೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಟ್ಟೆಮನೆ ನಿವಾಸಿ ಆಕ್ಟಿವಾ ಹೋಂಡಾ ಸವಾರ ಹರ್ಷಿತ್‌ ಎಂಬವರು ಬಿಸಿರೋಡ್‌ ಕಡೆಯಿಂದ ಪುಂಜಾಲಕಟ್ಟೆ ಕಡೆಗೆ ತನ್ನ ಆಕ್ಟಿವಾ ಹೋಂಡಾ ವನ್ನು ಹೆದ್ದಾರಿಯಲ್ಲಿ ಚಲಾಯಿಸಿಕೊಂಡು ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಟ್ಟೆಮನೆ ರಾಷ್ಟ್ರೀಯ ಹೆದ್ದಾರಿ -73 ರಲ್ಲಿ ತಿರುವಿನಲ್ಲಿ ಸವಾರನ ನಿಯಂತ್ರಣ ತಪ್ಪಿ ಇಲಾಖಾ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದು ಆಕ್ಟಿವಾ ಹೋಂಡಾ ಸಮೇತ ರಸ್ತೆಗೆ ಬಿದ್ದು ತಲೆಗೆ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್‌ ನಲ್ಲಿ ಮಂಗಳೂರು ಆಸ್ಪತ್ರೆಗೆ ಕಳುಹಿಸಿಕೊಟ್ಟಿರುವುದಾಗಿದೆ.


ಈ ಬಗ್ಗೆ ಸ್ಕೂಟಿ ಸವಾರರ ಸಂಬಂಧಿಕರಿಂದ ದೂರು ಪಡೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Related posts

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!