July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

ಬೆಳ್ತಂಗಡಿ: ಅನುಗ್ರಹ ಎಜುಕೇಶನ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಇದರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು, ಬೆಳ್ತಂಗಡಿಯಲ್ಲಿ ಟೀಚರ್ಸ್ ಡೇ ಹಾಗೂ ಓಣಂ ಹಬ್ಬವನ್ನು ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸ್ಥಾಪಕಾಧ್ಯಕ್ಷ, ಮುಖ್ಯಸ್ಥ ಹಾಗೂ ಪ್ರಾಂಶುಪಾಲರಾದ ಎಂ.ಜಿ. ತಲ್ಹತ್ ಸವಣಾಲು ಅವರು ಮಾತನಾಡಿ: “ಶಿಕ್ಷಕರು ಸಮಾಜದ ದೀಪಸ್ತಂಭರಾಗಿದ್ದಾರೆ. ಒಬ್ಬ ವಿದ್ಯಾರ್ಥಿಯ ಜೀವನವನ್ನು ಬೆಳಗಿಸಲು ಅವರು ತಮ್ಮ ಶ್ರಮವನ್ನು ಅರ್ಪಿಸುತ್ತಾರೆ. ಆದ್ದರಿಂದಲೇ ಶಿಕ್ಷಕರ ದಿನವು ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ಮಹತ್ವದ ದಿನವಾಗಿದೆ. ಓಣಂ ಹಬ್ಬವು ಒಗ್ಗಟ್ಟು ಮತ್ತು ಸಹಬಾಳ್ವೆಯ ಸಂಕೇತವಾಗಿದೆ. ವಿಭಿನ್ನ ಧರ್ಮ, ಸಂಸ್ಕೃತಿಯ ಜನರು ಒಂದಾಗಿ ಸಂತೋಷ ಹಂಚಿಕೊಳ್ಳುವ ಹಬ್ಬವೆಂದರೆ ಅದು ಓಣಂ. ಈ ಮೌಲ್ಯಗಳನ್ನು ನಮ್ಮ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ, ಅವರು ಉತ್ತಮ ನಾಗರಿಕರಾಗಿ ಬೆಳೆದೀತರು,” ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ನಿರ್ದೇಶಕ ಜಿತೇಶ್ ಕುಮಾರ್ ಅವರು”ವಿದ್ಯಾರ್ಥಿಗಳು ಪಾಠ್ಯಕ್ರಮದ ಜೊತೆಗೆ ಕಲೆ-ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಅದು ಅವರ ವ್ಯಕ್ತಿತ್ವವನ್ನು ಸಂಪೂರ್ಣಗೊಳಿಸುತ್ತದೆ. ಶಿಕ್ಷಕರ ದಿನಾಚರಣೆ ನಮ್ಮ ಜೀವನದಲ್ಲಿ ಗುರುಗಳ ಸ್ಥಾನ ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ನೆನಪಿಸುತ್ತದೆ. ಓಣಂ ಹಬ್ಬವು ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಹಬ್ಬ,” ಎಂದು ಹೇಳಿದರು.

ಫ್ಯಾಷನ್ ಡಿಸೈನರ್, ಮಹಿಳಾ ಉದ್ಯಮಿ ಹಾಗೂ ರಾಜ್ಯ ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಝೀನತ್ ಉಜಿರೆ ಉಪಸ್ಥಿತರಿದ್ದರು. ಕಾಲೇಜಿನ ನಿರ್ದೇಶಕ ಮುಹಮ್ಮದ್ ತೌಸೀಫ್ ಕಕ್ಕಿಂಜೆ ಸ್ವಾಗತಿಸಿ. ನಿರ್ದೇಶಕ ಅಬ್ದುಲ್ ಖಾದರ್ ನಾವೂರು ಧನ್ಯವಾದವಿತ್ತರು.

ಕಾರ್ಯಕ್ರಮವನ್ನು ಫ್ಯಾಷನ್ ಡಿಸೈನಿಂಗ್ ವಿಭಾಗದ ವಿದ್ಯಾರ್ಥಿನಿಯರಾದ ಸಬಾ ಕಕ್ಕಿಂಜೆ, ಉಸೈಮಾ ಆಲ್ದೂರು ಮತ್ತು ಫೈರ್ ಅಂಡ್ ಸೇಫ್ಟಿ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ರಾಫಿ ಸಮರ್ಪಕವಾಗಿ ನಿರೂಪಿಸಿದರು.

ಫೈರ್ ಅಂಡ್ ಸೇಫ್ಟಿ, ಏರೋನಾಟಿಕಲ್, ಮೆರೈನ್ ಸೇಫ್ಟಿ ಇಂಜಿನಿಯರಿಂಗ್, ಏರ್‌ಕಂಡೀಷನಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ವಿಭಾಗದ ವಿದ್ಯಾರ್ಥಿಗಳಿಂದ ನೃತ್ಯ, ಗಾಯನ, ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಆಟೋಟ ಸ್ಪರ್ಧೆಗಳನ್ನೂ ಆಯೋಜಿಸಿದ್ದರು.

Related posts

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya

ಮುಂಡಾಜೆ: ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

Suddi Udaya
error: Content is protected !!