July 23, 2026
ಅಪರಾಧ ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಹೇಳಿಕೆ ಅಂತ್ಯ:ನನ್ನ ತಪ್ಪಿಲ್ಲ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ ಚಿನ್ನಯ್ಯ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದ್ದಾರೆ.

ಕೋರ್ಟ್ ನಲ್ಲಿ ಚಿನ್ನಯ್ಯ ಈ ಪ್ರಕರಣದಲ್ಲಿ ನನ್ನ ತಪ್ಪಿಲ್ಲ ನನಗೆ ಹೇಳಿ ಮಾಡಿಸಿದ್ದಾಗಿ ಕಣ್ಣೀರು ಹಾಕಿದ್ದಾನೆ. ಬಳಿಕ ಪ್ರಕರಣದ ಬಗ್ಗೆ ವಿವರವಾಗಿ ನ್ಯಾಯಾಲಧೀಶರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.ಆರೋಪಿ ಚಿನ್ನಯ್ಯ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾ ವಿಜಯೇಂದ್ರ ಹೆಚ್.ಟಿ ಮುಂದೆ ಹೇಳಿಕೆ ನೀಡಿ ಸಂಜೆ 6:30 ಗಂಟೆಗೆ ವಾಪಸ್ ಶಿವಮೊಗ್ಗ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.ಇವತ್ತು ಚಿನ್ನಯ್ಯನ ಸಂಪೂರ್ಣ ಹೇಳಿಕೆ ಮುಗಿದಿಲ್ಲ ಮತ್ತೆ ಸೆ.25 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಉಳಿದ ಹೇಳಿಕೆ ದಾಖಲು ಮಾಡಲಿದ್ದಾರೆ ನ್ಯಾಯಾಧೀಶರು.

Related posts

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya
error: Content is protected !!