September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನವರ ಅಧ್ಯಕ್ಷತೆಯಲ್ಲಿ ಸೆ.23ರಂದು ಮಚ್ಚಿನ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಜರಗಿತ್ತು.


ಮುಖ್ಯ ಕಾರ್ಯನಿರ್ಧಿಕಾರಿ ಚಂದಪ್ಪ ಸಾಲಿಯಾನ್ ಲೆಕ್ಕಪತ್ರ ಮಂಡಿಸಿದರು. ರೂ. 93. 37ಲಕ್ಷ ವಾರ್ಷಿಕ ವ್ಯವಹಾರ ,
ರೂ. 4.83ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 14 ಡಿವಿಡೆಂಟ್ , ಶೇಕಡ 65 ಬೋನಸ್ ನೀಡುವುದಾಗಿ
ಪದ್ಮನಾಭ ಸಾಲಿಯನ್ ಘೋಷಿಸಿದರು.

ದ. ಕ. ಜಿ. ಸ. ಹಾಲು ಒಕ್ಕೂಟ ಮಂಗಳೂರು ವಿಸ್ತರಣಾಧಿಕಾರಿ ರಾಜೇಶ್ ಪಿಕೆ. ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ನಿರ್ದೇಶಕರಾದ ವಿಶ್ವನಾಥ್ ಬಂಗೇರ, ನೊಣಯ್ಯ ಯಂ. ಕೆ., ಸದಾನಂದ ಪೂಜಾರಿ, ಶಿವರಾಮ ಬಂಗೇರ, ವನಿತಾ ಜಯರಾಮ, ಗುಲಾಬಿ, ರುಕ್ಮಿಣಿ., ಶಾಂತಮ್ಮ, ಮೋನಪ್ಪ ಮೂಲ್ಯ, ಯುವರಾಜ್ ಜೈನ್ ಉಪಸ್ಥಿತರಿದ್ದರು.
ಉಪಾಧ್ಯಕ್ಷ ಮಾಧವ ನಾಯ್ಕ ಸ್ವಾಗತಿಸಿದರು.ಸಿಬ್ಬಂದಿಯಾದ ಸಂತೋಷ ಕುಮಾರ್, ಇಂದಿರಾ ಸಹಕರಿಸಿದರು.

Related posts

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ ರಾಜ್ಯರಂಗ ‘ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya
error: Content is protected !!