September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಬೆಳ್ತಂಗಡಿ: ದೇಯಿಬೈದೈತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸೆ.22 ರಂದು ನವರಾತ್ರಿ ಮಹೋತ್ಸವ ಪ್ರಾರಂಭಗೊಂಡಿತು.
ಪುತ್ತೂರು ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ, ಉದ್ಯಮಿ ವರದರಾಜ ಉಪ್ಪಿನಂಗಡಿ ದೀಪ ಬೆಳಗಿಸಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿ ನವರಾತ್ರಿಯ ಧಾರ್ಮಿಕ ಕಾರ್ಯಕ್ರಮ ನಮ್ಮ ಅಂತರಾತ್ಮವನ್ನು ಬೆಳಗಲಿ ಶ್ರೀ ಕ್ಷೇತ್ರ ಧಾರ್ಮಿಕತೆಯ ಮೂಲಕ ಸಾಮಾಜಿಕ ಜಾಗೃತಿಯ ಕೆಲಸ ಮಾಡುತ್ತಿದೆ ಎಂದರು.

ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರಾದ ರವಿಪೂಜಾರಿ ಪೂಜಾರಿ ಚಿಲಿಂಬಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ನವರಾತ್ರಿಯ ದಿನ ನಿತ್ಯ ಮಹಾ ಮಾತೆ ದೇಯಿ ಬೈದ್ಯೆತಿ ಗೆ ವಿಶೇಷ ಅಲಂಕಾರ ಪೂಜೆ ,ಅನ್ನದಾನ ಸೇವೆ, ವಾಹನ ಪೂಜೆ, ವಿಜಯ ದಶಮಿ ದಿನ ಮಕ್ಕಳಿಗೆ ಅಕ್ಷರಾಭ್ಯಾಸ ಜರಗಲಿದ್ದು ಭಕ್ತಾದಿಗಳು ಮಹಾ ಮಾತೆಯ ಕೃಪೆಗೆ ಪಾತ್ರರಾಗ ಬೇಕು ಎಂದರು.

ಕ್ಷೇತ್ರದ ಶಿವಾನಂದ ತಂತ್ರಿಗಳು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.ಆದಿಶಕ್ತಿ ಮಹಿಳಾ ಭಜನಾ ಸಂಘ ಪಟ್ಟೆ ಇವರಿಂದ ಭಜನಾ ಸಂಕೀರ್ತನೆ ನಡೆಯಿತು.

ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷರಾದ ಪೀತಾಂಬರ ಹೆರಾಜೆ, ಜಯಂತ ನಡುಬೈಲ್ ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ಕೆ.ಬಿ. ಕೋಶಾಧಿಕಾರಿ ಮೋಹನ್ ದಾಸ್ ವಾಮಂಜೂರು,ಟ್ರಸ್ಟಿನ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಸೆಂಟರ್ ಮೆಲ್ಕಾರ್, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್,ಕ್ಷೇತ್ರದ ಮೊಕೇಸರ ಶ್ರೀಧರ ಪೂಜಾರಿ, ಪ್ರಮುಖರಾದ ಆರ್ ಸಿ ನಾರಾಯಣ ನಿತೀಶ್ ಕುಮಾರ್ ಶಾಂತಿವನ, ನಾರಾಯಣ ಕುರಿಕಾರ್, ಮಂಗಳೂರು ಮಾಜಿ ಮೇಯರ್ ಹೇಮಲತಾರಘು ಸಾಲ್ಯಾನ್, ಶಾಲಿನಿ ರವಿ ಪೂಜಾರಿ,ರೇಖಾ ನಾಗರಾಜ್, ಪ್ರದೀಪ ಪೂಜಾರಿ, ಜನಾರ್ಧನ ಪೂಜಾರಿ ನೂಜ,ಮತ್ತಿತರರು ಉಪಸ್ಥಿತರಿದ್ದರು. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.ನೂರಾರು ಭಕ್ತಾಭಿಮಾನಿಗಳು ಭಾಗವಹಿಸಿ ತಾಯಿ ದೇಯಿ ಬೈದ್ಯೆತಿ ಕೃಪೆಗೆ ಪಾತ್ರರಾದರು.

Related posts

ಕೊಕ್ಕಡ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು: ಮಲೆಬೆಟ್ಟು ಬದಿನಡೆ ಶ್ರೀ ವನದುರ್ಗ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya
error: Content is protected !!