23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು, ಇಂಟರ್ ನ್ಯಾಷನಲ್ ಲಯನ್ಸ್ ಕ್ಲಬ್ ಪುತ್ತೂರು ಕ್ರೌನ್ ಹಾಗೂ ಎ.ಜೆ.ಆಸ್ಪತ್ರೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸೆ. 22 ರಂದು ಆಯೋಜಿಸಲಾಗಿತ್ತು.


ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಸಿಯೋನ್ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ರವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿಕೊಂಡು, “ಇಂತಹ ಆರೋಗ್ಯ ಶಿಬಿರಗಳು ಗ್ರಾಮೀಣ ಪ್ರದೇಶದಲ್ಲಿರುವ ನಮ್ಮಆಶ್ರಮನಿವಾಸಿಗಳಿಗೆ ತುಂಬಾ ಉಪಯುಕ್ತವಾಗುತ್ತವೆ.” ಎಂದು ಶುಭ ಹಾರೈಸಿದರು. ಲಯನ್ಸ್ ಕ್ಲಬ್ ಪುತ್ತೂರು ಕ್ರೌನ್ ಇದರ ಅಧ್ಯಕ್ಷ ಆಂಟನಿ ಒಲಿವೆರಾರವರು “ಸೇವೆಯೇ ನಮ್ಮ ಧ್ಯೇಯ. ಇಂತಹ ಶಿಬಿರಗಳು ಜನರ ಜೀವನಕ್ಕೆ ಆಶಾಕಿರಣ ತರುತ್ತವೆ. ಆರೋಗ್ಯ ಶಿಬಿರ ಯಶಸ್ವಿಯಾಗಿ ನಡೆಯಲಿ ಎಲ್ಲರೂ ಆರೋಗ್ಯವಾಗಿರಲಿ” ಎಂದು ಹೇಳಿದರು.

ಎ.ಜೆ.ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಮಂಗಳೂರು ಇಲ್ಲಿನ ವೈದ್ಯಕೀಯ ಅಧಿಕಾರಿ ಡಾ.ಮೆಘನ್ ಹಾಗೂ ಎ.ಜೆ.ಅಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 294ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಲಯನ್ಸ್ ಕ್ಲಬ್ ಮಾರ್ಗದರ್ಶಕರಾದ ಲ್ಯಾನ್ಸಿ ಮಸ್ಕರೇನಸ್, ಸಂಸ್ಥೆಯ ವೈದ್ಯಾಧಿಕಾರಿ ಡಾ.ಶಿವಾನಂದಸ್ವಾಮಿ, ಸಂಸ್ಥೆಯ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ಆಶಾ ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು.

Related posts

ಆಶುಭಾಷಣ ಸ್ಪರ್ಧೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇದ ಕೃಷ್ಣ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!