37.9 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿ

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

ಬೆಳ್ತಂಗಡಿ : ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಸೆಂಟರ್ ಮತ್ತು ಎಸ್ ಡಿ ಎಂ ಐಟಿ ಉಜಿರೆ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆ ಸಹಯೋಗದಲ್ಲಿ ಇಂಜಿನಿಯರ್ಸ್ ಡೇ – 2025 ಕಾರ್ಯಕ್ರಮ ಆಯೋಜಿಸಲಾಯಿತು.

ಬೆಳ್ತಂಗಡಿಯಿಂದ ಎಸ್ ಡಿ ಎಂ ಐಟಿ ವರೆಗೆ ಮೋಟಾರ್ ರ್ಯಾಲಿ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.ಎಸ್ ಡಿ ಎಂ ಐಟಿ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಅತಿಥಿಗಳಿಂದ ದೀಪ ಪ್ರಜ್ವಲನ ಹಾಗೂ ವಿಶ್ವೇಶರಯರಿಗೆ ಪುಷ್ಪಾರ್ಚನೆ ನೆರವೇರಿತು.

ಸ್ವಾಗತ ಭಾಷಣವನ್ನು Er. ತೃಪ್ತಿ ರತನ್ (HOD, SDM ಪಾಲಿಟೆಕ್ನಿಕ್) ಮಾಡಿದರು.ಎಮಿನೆಂಟ್ ಇಂಜಿನಿಯರ್ 2025 ಗೌರವವನ್ನು Er. ಆನಂದ ಭಟ್ ಮತ್ತು Er. ವಿಜಯ ವಿಷ್ಣು ಮಯ್ಯ ಟಿ. ಅವರಿಗೆ ನೀಡಲಾಯಿತು. SDMIT ಮತ್ತು SDM ಪಾಲಿಟೆಕ್ನಿಕ್‌ನ ಶ್ರೇಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೂ ಸನ್ಮಾನ ನೀಡಲಾಯಿತು.

ಪ್ರಾಂಶುಪಾಲರ ಸಂದೇಶದ ನಂತರ Er. ಜಗದೀಶ್ ಪ್ರಸಾದ್ ಎನ್. (ಅಧ್ಯಕ್ಷರು, ACCE[I] ಬೆಳ್ತಂಗಡಿ ಕೇಂದ್ರ) KPCEA 2024 ಕುರಿತ ಮಾಹಿತಿ ಹಂಚಿದರು. ಕಾರ್ಯಕ್ರಮದ ನಿರೂಪಣೆ Dr. ರವೀಶ್ ಪಡುಮಲೆ (HOD, SDM IT, ಉಜಿರೆ) ನಡೆಸಿದರು.

ಕೊನೆಯಲ್ಲಿ Er. ಕೇಶವ್ ವಂದನೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸೆಂಟರ್‌ನ ಅನೇಕ ಇಂಜಿನಿಯರ್‌ಗಳು, SDM ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!