23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿ

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

ಬೆಳ್ತಂಗಡಿ : ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಸೆಂಟರ್ ಮತ್ತು ಎಸ್ ಡಿ ಎಂ ಐಟಿ ಉಜಿರೆ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆ ಸಹಯೋಗದಲ್ಲಿ ಇಂಜಿನಿಯರ್ಸ್ ಡೇ – 2025 ಕಾರ್ಯಕ್ರಮ ಆಯೋಜಿಸಲಾಯಿತು.

ಬೆಳ್ತಂಗಡಿಯಿಂದ ಎಸ್ ಡಿ ಎಂ ಐಟಿ ವರೆಗೆ ಮೋಟಾರ್ ರ್ಯಾಲಿ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.ಎಸ್ ಡಿ ಎಂ ಐಟಿ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಅತಿಥಿಗಳಿಂದ ದೀಪ ಪ್ರಜ್ವಲನ ಹಾಗೂ ವಿಶ್ವೇಶರಯರಿಗೆ ಪುಷ್ಪಾರ್ಚನೆ ನೆರವೇರಿತು.

ಸ್ವಾಗತ ಭಾಷಣವನ್ನು Er. ತೃಪ್ತಿ ರತನ್ (HOD, SDM ಪಾಲಿಟೆಕ್ನಿಕ್) ಮಾಡಿದರು.ಎಮಿನೆಂಟ್ ಇಂಜಿನಿಯರ್ 2025 ಗೌರವವನ್ನು Er. ಆನಂದ ಭಟ್ ಮತ್ತು Er. ವಿಜಯ ವಿಷ್ಣು ಮಯ್ಯ ಟಿ. ಅವರಿಗೆ ನೀಡಲಾಯಿತು. SDMIT ಮತ್ತು SDM ಪಾಲಿಟೆಕ್ನಿಕ್‌ನ ಶ್ರೇಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೂ ಸನ್ಮಾನ ನೀಡಲಾಯಿತು.

ಪ್ರಾಂಶುಪಾಲರ ಸಂದೇಶದ ನಂತರ Er. ಜಗದೀಶ್ ಪ್ರಸಾದ್ ಎನ್. (ಅಧ್ಯಕ್ಷರು, ACCE[I] ಬೆಳ್ತಂಗಡಿ ಕೇಂದ್ರ) KPCEA 2024 ಕುರಿತ ಮಾಹಿತಿ ಹಂಚಿದರು. ಕಾರ್ಯಕ್ರಮದ ನಿರೂಪಣೆ Dr. ರವೀಶ್ ಪಡುಮಲೆ (HOD, SDM IT, ಉಜಿರೆ) ನಡೆಸಿದರು.

ಕೊನೆಯಲ್ಲಿ Er. ಕೇಶವ್ ವಂದನೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸೆಂಟರ್‌ನ ಅನೇಕ ಇಂಜಿನಿಯರ್‌ಗಳು, SDM ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!