ಪದ್ಮುಂಜ : ಕಣಿಯೂರು ಗ್ರಾಮ ಪಂಚಾಯತ್ನ ೨೦೨೫-೨೬ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ. 23 ರಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಅಧ್ಯಕ್ಷ ಸೀತಾರಾಮ ಮಡಿವಾಳ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಪಂಚಾಯತ್ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಜನಾರ್ದನ ಸಭೆಯನ್ನು ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು. ಉಪಾಧ್ಯಕ್ಷೆ ಜಾನಕಿ, ಸದಸ್ಯರಾದ ಸುಮತಿ, ಹರೀಶ್ ಎನ್, ಕೃಷ್ಣಪ್ರಸಾದ್, ಯಶೋಧಾ, ಜಲಾಜಾಕ್ಷಿ, ಉಮವಾತಿ, ರಾಜೇಶ್, ಸುಮತಿ ಶೆಟ್ಟಿ, ಅಮೀತ್ ಕುಮಾರ್, ಗಾಯತ್ರಿ, ಪ್ರಿಯಾಂಕ, ಸೇಸಪ್ಪ ಮೂಲ್ಯ ಹಾಗೂ ಮೋಹಿಣಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಒಕ್ಕೂಟದ ಸದಸ್ಯರು, ಕೃಷಿ ಮತ್ತು ಪಶು ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್ ಸ್ವಾಗತಿಸಿದರು. ಕಾರ್ಯದರ್ಶಿ ರಮೇಶ್ ಕೆ. ವಂದಿಸಿದರು, ಸಿಬ್ಬಂದಿಗಳಾದ ಉಮೇಶ್, ಪ್ರದೀಪ್ ಕರಾಯ, ಲಕ್ಷಿö್ಮÃ, ರೇವತಿ, ರತ್ನಾವತಿ, ಲೋಕಮ್ಮ ಶ್ವೇತಾ ಹಾಗೂ ಸುನಂದ, ತ್ರೋಬಾಲ್ ಕ್ರೀಡಾಪಟು ವಿಲಾಸ್ ಶೆಟ್ಟಿ ಹಾಗೂ ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿ ವಿದ್ಯಾರ್ಥಿನಿ ಶ್ರೀದೇವಿ ಅವರನ್ನು ಸನ್ಮಾನಿಸಲಾಯಿತು.











