23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ : ನಿವೇಶನ ಮಾರಾಟದ ಬಗ್ಗೆ ಅಗ್ರಿಮೆಂಟ್ ಮಾಡಿ ರೂ 45 ಲಕ್ಷ ಹಣ ಪಡೆದುಕೊಂಡು ವಂಚಿಸಿರುವ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರವೀಣ್ ಭಂಡಾರಿ ಹಾಗೂ ಕಲ್ಮಂಜ ನಿವಾಸಿ ಶಾಂತ ಅವರ ವಿರುದ್ದ ಬೆಳ್ತಂಗಡಿ ನಿವಾಸಿ ವಿಶ್ವನಾಥ ರೈ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ವಿಶ್ವನಾಥ್ ರೈ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಲ್ಲಿ ಆರೋಪಿ ಪ್ರವೀಣ್ ಭಂಡಾರಿ ಎಂಬಾತನು ಎರಡನೆ ಶಾಂತಾ ಎಂಬವರಿಂದ ಒಟ್ಟು 40 ಸೆನ್ಸ್ ಜಾಗವನ್ನು ಖರೀದಿ ಮಾಡಿ ಬಳಿಕ ಅದನ್ನು ವಿಶ್ವನಾಥ ರೈ ಅವರಿಗೆ ಮಾರಾಟ ಮಾಡುವುದಾಗಿ ಹೇಳಿ ರೂ 45 ಲಕ್ಷ ಹಣವನ್ನು ಪಡೆದುಕೊಂಡು ಮೂರು ತಿಂಗಳ ಒಳಗೆ ದಾಖಲೆಗಳನ್ನು ಸರಿಪಡಿಸಿ ಬರೆದು ಕೊಡುವುದಾಗಿ 9/1/24 ರಂದು ನೊಂದಾಯಿತ ಕರಾರುಪತ್ರ ಮಾಡಿಕೊಂಡಿದ್ದಾರೆ.

ಇದಾದ ಬಳಿಕ ಜಾಗವನ್ನು ಕ್ರಯಸಾಧನ ಮಾಡಿಕೊಡದೆ ಪಡೆದ ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ ಅಲ್ಲದೆ ಎರಡನೆ ಆಪಾದಿತರಲ್ಲಿ ಈ ಹಿಂದೆ ಮಾಡಿಕೊಂಡಿದ್ದ ಮಾರಾಟ ಕ್ರಯ ಸಾಧನವನ್ನು ರದ್ದು ಪಡಿಸಿದ್ದಾರೆ. ಈ ಮೂಲಕ ಪಡೆದ ಹಣವನ್ನು ಹಿಂತಿರುಗಿಸದೆ ಜಾಗವನ್ನೂ ನೀಡಿದೆ ವಂಚಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ಭಂಡಾರಿ ಮತ್ತು ಶಾಂತ ವಿರುದ್ಧ ಸೆ. 20ರಂದು ಬಿಎನ್.ಎಸ್.u/s 316(2),318(4)ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!