September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ : ನಿವೇಶನ ಮಾರಾಟದ ಬಗ್ಗೆ ಅಗ್ರಿಮೆಂಟ್ ಮಾಡಿ ರೂ 45 ಲಕ್ಷ ಹಣ ಪಡೆದುಕೊಂಡು ವಂಚಿಸಿರುವ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರವೀಣ್ ಭಂಡಾರಿ ಹಾಗೂ ಕಲ್ಮಂಜ ನಿವಾಸಿ ಶಾಂತ ಅವರ ವಿರುದ್ದ ಬೆಳ್ತಂಗಡಿ ನಿವಾಸಿ ವಿಶ್ವನಾಥ ರೈ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ವಿಶ್ವನಾಥ್ ರೈ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಲ್ಲಿ ಆರೋಪಿ ಪ್ರವೀಣ್ ಭಂಡಾರಿ ಎಂಬಾತನು ಎರಡನೆ ಶಾಂತಾ ಎಂಬವರಿಂದ ಒಟ್ಟು 40 ಸೆನ್ಸ್ ಜಾಗವನ್ನು ಖರೀದಿ ಮಾಡಿ ಬಳಿಕ ಅದನ್ನು ವಿಶ್ವನಾಥ ರೈ ಅವರಿಗೆ ಮಾರಾಟ ಮಾಡುವುದಾಗಿ ಹೇಳಿ ರೂ 45 ಲಕ್ಷ ಹಣವನ್ನು ಪಡೆದುಕೊಂಡು ಮೂರು ತಿಂಗಳ ಒಳಗೆ ದಾಖಲೆಗಳನ್ನು ಸರಿಪಡಿಸಿ ಬರೆದು ಕೊಡುವುದಾಗಿ 9/1/24 ರಂದು ನೊಂದಾಯಿತ ಕರಾರುಪತ್ರ ಮಾಡಿಕೊಂಡಿದ್ದಾರೆ.

ಇದಾದ ಬಳಿಕ ಜಾಗವನ್ನು ಕ್ರಯಸಾಧನ ಮಾಡಿಕೊಡದೆ ಪಡೆದ ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ ಅಲ್ಲದೆ ಎರಡನೆ ಆಪಾದಿತರಲ್ಲಿ ಈ ಹಿಂದೆ ಮಾಡಿಕೊಂಡಿದ್ದ ಮಾರಾಟ ಕ್ರಯ ಸಾಧನವನ್ನು ರದ್ದು ಪಡಿಸಿದ್ದಾರೆ. ಈ ಮೂಲಕ ಪಡೆದ ಹಣವನ್ನು ಹಿಂತಿರುಗಿಸದೆ ಜಾಗವನ್ನೂ ನೀಡಿದೆ ವಂಚಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ಭಂಡಾರಿ ಮತ್ತು ಶಾಂತ ವಿರುದ್ಧ ಸೆ. 20ರಂದು ಬಿಎನ್.ಎಸ್.u/s 316(2),318(4)ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!