September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರವು ಆಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025, ಸೆ. 22ರಿಂದ ಆರಂಭಗೊಂಡಿದ್ದು, ಈ ಸಮೀಕ್ಷೆಗೆ ನಿಯೋಜಿತ ಅಧಿಕಾರಿಗಳಿಂದ ಪ್ರತಿ ಮನೆಗೆ ಯುಹೆಚ್ ಐಡಿ ಸಂಖ್ಯೆ ಅಂಟಿಸಲಾಗಿದ್ದು ದಾಖಲಾತಿ ಕೆಲಸ ಪ್ರಾರಂಭಗೊಂಡಿರುತ್ತದೆ. ಸಮೀಕ್ಷೆದಾರರು ಮನೆಗೆ ಬಂದಾಗ ಸಮಸ್ತ ಒಕ್ಕಲಿಗ ಸಮಾಜದವರು ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ.ನಿರ್ಮಾಲಾನಂದನಾಥ ಮಹಾಸ್ವಾಮೀಜಿಯವರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇವರ ಸೂಚನೆಯಂತೆ ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾಸಂಘ ಇದರ ಆಶಯದಂತೆ ಸಮೀಕ್ಷೆಯ ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು, ಉಪಜಾತಿ ಕಾಲಂನಲ್ಲಿ “ಗೌಡ” ಎಂದೂ, ಮಾತೃಭಾಷೆ ಕಾಲಂನಲ್ಲಿ ಪ್ರಾದೇಶಿಕ ಭಾಷೆಗಳಾದ ಕನ್ನಡ, ತುಳು ಇವುಗಳಲ್ಲಿ ಮಾತೃಭಾಷೆಯನ್ನು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ತಿಳಿಸಿದ್ದಾರೆ.

ಒಕ್ಕಲಿಗ ಗೌಡ ಸಮಾಜದ ಕೋಡ್ ಸಂಖ್ಯೆ ಎ-1541 ಆಗಿದ್ದು, ಇದನ್ನು ಸಹ ಗಮನಿಸಿಕೊಂಡು ನಾವು ಕೊಡುವ ಮಾಹಿತಿ ಪರಿಪೂರ್ಣವಾಗಿರುವಂತೆ ನೋಡಿಕೊಳ್ಳುವುದು ಜವಾಬ್ದಾರಿಯಾಗಿರುತ್ತದೆ. ಏಕೆಂದರೆ ವಕ್ಕಲಿಗ ಎಂಬ ಇನ್ನೊಂದು ಸಮುದಾಯವಿದ್ದು, ಅದರ ಕೋಡ್ ಸಂಖ್ಯೆ ಬೇರೆಯೇ ಆಗಿರುತ್ತದೆ. ಪ್ರತಿಯೊಬ್ಬರು ಒಬ್ಬರಿಗೊಬ್ಬರು ಈ ಮಾಹಿತಿಯನ್ನು ಹಂಚಿಕೊಂಡು ನಮ್ಮ ಸಮಾಜದ ಪ್ರತಿಯೊಬ್ಬರು ಒಂದೇ ರೀತಿಯ ಮಾಹಿತಿಯನ್ನು ನೀಡುವಂತೆ ತಿಳಿಸಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!