23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರವು ಆಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025, ಸೆ. 22ರಿಂದ ಆರಂಭಗೊಂಡಿದ್ದು, ಈ ಸಮೀಕ್ಷೆಗೆ ನಿಯೋಜಿತ ಅಧಿಕಾರಿಗಳಿಂದ ಪ್ರತಿ ಮನೆಗೆ ಯುಹೆಚ್ ಐಡಿ ಸಂಖ್ಯೆ ಅಂಟಿಸಲಾಗಿದ್ದು ದಾಖಲಾತಿ ಕೆಲಸ ಪ್ರಾರಂಭಗೊಂಡಿರುತ್ತದೆ. ಸಮೀಕ್ಷೆದಾರರು ಮನೆಗೆ ಬಂದಾಗ ಸಮಸ್ತ ಒಕ್ಕಲಿಗ ಸಮಾಜದವರು ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ.ನಿರ್ಮಾಲಾನಂದನಾಥ ಮಹಾಸ್ವಾಮೀಜಿಯವರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇವರ ಸೂಚನೆಯಂತೆ ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾಸಂಘ ಇದರ ಆಶಯದಂತೆ ಸಮೀಕ್ಷೆಯ ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು, ಉಪಜಾತಿ ಕಾಲಂನಲ್ಲಿ “ಗೌಡ” ಎಂದೂ, ಮಾತೃಭಾಷೆ ಕಾಲಂನಲ್ಲಿ ಪ್ರಾದೇಶಿಕ ಭಾಷೆಗಳಾದ ಕನ್ನಡ, ತುಳು ಇವುಗಳಲ್ಲಿ ಮಾತೃಭಾಷೆಯನ್ನು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ತಿಳಿಸಿದ್ದಾರೆ.

ಒಕ್ಕಲಿಗ ಗೌಡ ಸಮಾಜದ ಕೋಡ್ ಸಂಖ್ಯೆ ಎ-1541 ಆಗಿದ್ದು, ಇದನ್ನು ಸಹ ಗಮನಿಸಿಕೊಂಡು ನಾವು ಕೊಡುವ ಮಾಹಿತಿ ಪರಿಪೂರ್ಣವಾಗಿರುವಂತೆ ನೋಡಿಕೊಳ್ಳುವುದು ಜವಾಬ್ದಾರಿಯಾಗಿರುತ್ತದೆ. ಏಕೆಂದರೆ ವಕ್ಕಲಿಗ ಎಂಬ ಇನ್ನೊಂದು ಸಮುದಾಯವಿದ್ದು, ಅದರ ಕೋಡ್ ಸಂಖ್ಯೆ ಬೇರೆಯೇ ಆಗಿರುತ್ತದೆ. ಪ್ರತಿಯೊಬ್ಬರು ಒಬ್ಬರಿಗೊಬ್ಬರು ಈ ಮಾಹಿತಿಯನ್ನು ಹಂಚಿಕೊಂಡು ನಮ್ಮ ಸಮಾಜದ ಪ್ರತಿಯೊಬ್ಬರು ಒಂದೇ ರೀತಿಯ ಮಾಹಿತಿಯನ್ನು ನೀಡುವಂತೆ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya
error: Content is protected !!