23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರದ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಪ್ರಾರಂಭಿಸಿರುತ್ತದೆ. ಸಮೀಕ್ಷೆ ನಡೆಸುವವರು ತಮ್ಮ ಮನೆಗೆ ಬಂದಾಗ ಈ ಕೆಳಗಿನಂತೆ ಮಾಹಿತಿಯನ್ನು ನೀಡಬೇಕಾಗಿ ಬಂಟರ ಸಂಘದಿಂದ ತಿಳಿಸಲಾಗಿದೆ.

ಸಮೀಕ್ಷೆ ನಡೆಸುವವರ ಮೊಬೈಲ್ ಆಪ್‌ನಲ್ಲಿರುವ 8ನೇ ಕಾಲಂನಲ್ಲಿ ಧರ್ಮ ಎಂದಿರುವ ಜಾಗದಲ್ಲಿ ಹಿಂದೂ ಎಂದು ನಮೂದಿಸಬೇಕು. 9ನೇ ಕಾಲಂನಲ್ಲಿ ಜಾತಿ ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A -0227)ರಂತೆ ಬಂಟ (Bunt) ಎಂದು ನಮೂದಿಸಬೇಕು. 11ನೇ ಕಾಲಂನಲ್ಲಿರುವ ಸಮಾನಾರ್ಥದ (ಪರ್ಯಾಯ) ಹೆಸರು ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (A-1026)ರಂತೆ ನಾಡವ (Nadava) ಎಂದು ನಮೂದಿಸಬೇಕು.

ಬಂಟರಲ್ಲಿ ಶೆಟ್ಟಿ, ಆಳ್ವ, ಸಾಮಾನಿ, ಭಂಡಾರಿ, ಅಡಪ, ಅಡ್ಯಂತಾಯ, ಪೂಂಜ, ಚೌಟಿ ಮುಂತಾದ ಕುಲನಾಮಗಳು (Surname) ಇದ್ದು ಇವುಗಳು ಜಾತಿ ಸೂಚಕ ಪದಗಳು ಆಗಿರುವುದಿಲ್ಲ. ಆದುದರಿಂದ ಎಲ್ಲಿಯೂ ತಮ್ಮ ಕುಲನಾಮಗಳನ್ನು ಪ್ರಸ್ತಾಪಿಸದೇ ಜಾತಿ ಕಾಲಂನಲ್ಲಿ ಬಂಟ ಎಂಬುದಾಗಿಯೂ ಸಮಾನಾರ್ಥದ (ಪರ್ಯಾಯ) ಹೆಸರು ಎಂಬಲ್ಲಿ ನಾಡವ ಎಂಬುದಾಗಿಯೂ ನಮೂದಿಸತಕ್ಕದ್ದು.

ಸಮುದಾಯಕ್ಕೆ ಶಿಕ್ಷಣ, ಉದ್ಯೋಗ ಹಾಗೂ ಇನ್ನಿತರ ಸರಕಾರಿ ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಈ ಜಾತಿ ಸಮೀಕ್ಷೆ ಅತ್ಯಂತ ಪ್ರಾಮುಖ್ಯವಾಗಿದ್ದು ಪ್ರತಿಯೊಬ್ಬರೂ ಮೇಲೆ ತಿಳಿಸಿದಂತೆ ಸರಿಯಾದ ಮಾಹಿತಿಯನ್ನು ನೀಡಬೇಕು ಎಂದು ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡ ತಿಳಿಸಿದ್ದದಾರೆ.

Related posts

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya
error: Content is protected !!