22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಜೇಸಿ ಸಪ್ತಾಹ ಅಂಗವಾಗಿ ತರಬೇತಿ ದಿನವನ್ನು ಆಚರಿಸಲಾಯಿತು.

ಉಜಿರೆಯ ಆದಿಗುರು ಕೌಶಲ್ಯ ಕೇಂದ್ರದಲ್ಲಿ ಮಹಿಳೆಯರಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ಉಜಿರೆಯ ರುಡ್‌ಸೆಟ್ ಸಂಸ್ಥೆ ಇಲ್ಲಿ ಉದ್ಯಮ ಕೌಶಲ್ಯದ ಬಗ್ಗೆ ತರಬೇತಿ ಹಮ್ಮಿಕೊಳ್ಳಲಾಯಿತು.

ವಲಯ ತರಬೇತುದಾರ ಪುತ್ತೂರಿನ ಮರಿಕ್ಕೆ ಸಾವಯುವ ಮಳಿಗೆ ಇದರ ಮಾಲಕ ಜೆಸಿಐ ವಲಯ 15ರ ವಲಯ ಉಪಾಧ್ಯಕ್ಷ ಸುಹಾಸ್ ಮರಿಕೆ ಇವರು ತರಬೇತಿ ನಡೆಸಿಕೊಟ್ಟರು.

ಉಜಿರೆ ರುಡ್ ಸೆಟ್ ನ ನಿರ್ದೇಶಕ ಅಜೇಯ, ಉಪನ್ಯಾಸಕ ಜೇಮ್ಸ್ ಅಬ್ರಹಾಂ, ಕರುಣಾಕರ ಜೈನ್, ಬ್ಯೂಟಿ ಪಾರ್ಲರ್ ಅತಿಥಿ ಉಪನ್ಯಾಸಕಿ ಮಾದವಿ ಮನೋಹರ ರೈ ಉಪಸ್ಥಿತರಿದ್ದರು. ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು ಜೇಸಿ ಅದ್ವಿತೀ ಕೆಎಸ್ ಜೇಸಿ ವಾಣಿ ಉದ್ಘೋಷಿಸಿದರು. ರಂಜನ್ ಗುಡಿಗಾರ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಜೆಸಿ ಭವ್ಯಶ್ರೀ ಕೀರ್ತಿರಾಜ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯದರ್ಶಿ ಪ್ರಮೋದ್ ಕೆ ವಂದಿಸಿದರು. ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಜೇಸಿ ಸದಸ್ಯರು, ಉಪಸ್ಥಿತರಿದ್ದು ಸಹಕರಿಸಿದರು.

Related posts

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!