23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

ಬೆಳ್ತಂಗಡಿ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ತಿರುವಿನಲ್ಲಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಧರ್ಮಸ್ಥಳ ಪೊಲೀಸ್ ಇಲಾಖಾ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಧರ್ಮಸ್ಥಳ ಪೊಲೀಸ್‌ ಠಾಣಾ ಪಿಎಸ್‌ ಐ ರವರು ಮಂಗಳೂರು ನ್ಯಾಯಾಲಯದಲ್ಲಿ ಸಾಕ್ಷಿ ನುಡಿಯಲು ಇಲಾಖಾ ಬೊಲೆರೋ ಜೀಪ್‌ನಲ್ಲಿ ಚಾಲಕ ರೊಂದಿಗೆ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಬೆಳಗ್ಗೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಟ್ಟೆಮನೆ ನಿವಾಸಿ ಆಕ್ಟಿವಾ ಹೋಂಡಾ ಸವಾರ ಹರ್ಷಿತ್‌ ಎಂಬವರು ಬಿಸಿರೋಡ್‌ ಕಡೆಯಿಂದ ಪುಂಜಾಲಕಟ್ಟೆ ಕಡೆಗೆ ತನ್ನ ಆಕ್ಟಿವಾ ಹೋಂಡಾ ವನ್ನು ಹೆದ್ದಾರಿಯಲ್ಲಿ ಚಲಾಯಿಸಿಕೊಂಡು ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಟ್ಟೆಮನೆ ರಾಷ್ಟ್ರೀಯ ಹೆದ್ದಾರಿ -73 ರಲ್ಲಿ ತಿರುವಿನಲ್ಲಿ ಸವಾರನ ನಿಯಂತ್ರಣ ತಪ್ಪಿ ಇಲಾಖಾ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದು ಆಕ್ಟಿವಾ ಹೋಂಡಾ ಸಮೇತ ರಸ್ತೆಗೆ ಬಿದ್ದು ತಲೆಗೆ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್‌ ನಲ್ಲಿ ಮಂಗಳೂರು ಆಸ್ಪತ್ರೆಗೆ ಕಳುಹಿಸಿಕೊಟ್ಟಿರುವುದಾಗಿದೆ.


ಈ ಬಗ್ಗೆ ಸ್ಕೂಟಿ ಸವಾರರ ಸಂಬಂಧಿಕರಿಂದ ದೂರು ಪಡೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Related posts

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!