22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

ಬೆಳ್ತಂಗಡಿ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ತಿರುವಿನಲ್ಲಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಧರ್ಮಸ್ಥಳ ಪೊಲೀಸ್ ಇಲಾಖಾ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಧರ್ಮಸ್ಥಳ ಪೊಲೀಸ್‌ ಠಾಣಾ ಪಿಎಸ್‌ ಐ ರವರು ಮಂಗಳೂರು ನ್ಯಾಯಾಲಯದಲ್ಲಿ ಸಾಕ್ಷಿ ನುಡಿಯಲು ಇಲಾಖಾ ಬೊಲೆರೋ ಜೀಪ್‌ನಲ್ಲಿ ಚಾಲಕ ರೊಂದಿಗೆ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಬೆಳಗ್ಗೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಟ್ಟೆಮನೆ ನಿವಾಸಿ ಆಕ್ಟಿವಾ ಹೋಂಡಾ ಸವಾರ ಹರ್ಷಿತ್‌ ಎಂಬವರು ಬಿಸಿರೋಡ್‌ ಕಡೆಯಿಂದ ಪುಂಜಾಲಕಟ್ಟೆ ಕಡೆಗೆ ತನ್ನ ಆಕ್ಟಿವಾ ಹೋಂಡಾ ವನ್ನು ಹೆದ್ದಾರಿಯಲ್ಲಿ ಚಲಾಯಿಸಿಕೊಂಡು ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಟ್ಟೆಮನೆ ರಾಷ್ಟ್ರೀಯ ಹೆದ್ದಾರಿ -73 ರಲ್ಲಿ ತಿರುವಿನಲ್ಲಿ ಸವಾರನ ನಿಯಂತ್ರಣ ತಪ್ಪಿ ಇಲಾಖಾ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದು ಆಕ್ಟಿವಾ ಹೋಂಡಾ ಸಮೇತ ರಸ್ತೆಗೆ ಬಿದ್ದು ತಲೆಗೆ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್‌ ನಲ್ಲಿ ಮಂಗಳೂರು ಆಸ್ಪತ್ರೆಗೆ ಕಳುಹಿಸಿಕೊಟ್ಟಿರುವುದಾಗಿದೆ.


ಈ ಬಗ್ಗೆ ಸ್ಕೂಟಿ ಸವಾರರ ಸಂಬಂಧಿಕರಿಂದ ದೂರು ಪಡೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Related posts

ಕಲ್ಮಂಜ: ಶ್ರೀಲಕ್ಷ್ಮಿ ರಾಮಚಂದ್ರ ಹೆಗಡೆ ನಿಧನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya
error: Content is protected !!