25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಪುದುವೆಟ್ಟು : ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟ ಪುದುವೆಟ್ಟು ಇದರ 2024-2025 ನೇ ಸಾಲಿನ ವಾರ್ಷಿಕ ಮಹಾ ಸಭೆಯು ಸೆ. 22 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕಮಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾಶ್ರೀ , ಒಕ್ಕೂಟದ ಪದಾಧಿಕಾರಿಗಳು, ಒಕ್ಕೂಟದ ಸಿಬ್ಬಂದಿಗಳು , ಸದಸ್ಯರು ಉಪಸ್ಥಿತರಿದ್ದರು. ಶ್ರೀಮತಿ ಸರೋಜ ಇವರ ಗಣೇಶ ಸ್ತುತಿ ಯೊಂದಿಗೆ ಮಹಾ ಸಭೆಯು ಪ್ರಾರಂಭಗೊಂಡಿತು. ಶ್ರೀಮತಿ ಸರಿತಾ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಪ್ರಸ್ತಾವಿಕ ಭಾಷಣ ಮಾಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು.


ಗ್ರಾಮ ಪಂಚಾಯತ್ಅಧ್ಯಕ್ಷ ಪೂರ್ಣಕ್ಷ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಶ್ರೀಮತಿ ಮನುಶ್ರೀ ಒಕ್ಕೂಟದ ಕಾರ್ಯದರ್ಶಿ ಇವರು ವಾರ್ಷಿಕ ವರದಿಯನ್ನು ಮಂಡಿಸಿದರು. . BRP-PRI ಶ್ರೀಮತಿ ಶ್ರೀಕಲಾ ಇವರು VPRP ಬಗ್ಗೆ ಸವಿಸ್ತಾರ ವಾಗಿ ಮಾಹಿತಿ ನೀಡಿದರು ನಂತರ ಪಶು ಸಖಿ ವಾರ್ಷಿಕ ಜಮಾ ಖರ್ಚಿನ ಮಂಡನೆ ಮಾಡಿದರು. ವಲಯ ಮೇಲ್ವಿಚಾರಕರು ಸಂಜೀವಿನಿಯ ಧ್ಯೇಯ ಉದ್ದೇಶ ಗಳ ಬಗ್ಗೆ ಸವಿಸ್ತಾಸಾರ ವಾಗಿ ಮಾತನಾಡಿದರು.BRP-PRI ಶ್ರೀ ಕಲಾ ಇವರು ಮಾದಕ ಮುಕ್ತ ಕರ್ನಾಟಕ ಇದರ ಪ್ರತಿಜ್ಞಾವಿಧಿಯನ್ನು ವಾಚಿಸಿದರು. ವಲಯ ಮೇಲ್ವಿಚಾರಕರು ಲಿಂಗತ್ವ ಆಧಾರಿತ ದೌರ್ಜನ್ಯ ಬಗ್ಗೆ ಮಾಹಿತಿ ನೀಡಿದರು. ಹರಿಣಾಕ್ಷಿ ಧನ್ಯವಾದವಿತ್ತರು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya
error: Content is protected !!