ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

ಮಾಲಾಡಿ : ಮಾಲಾಡಿ ಅಂಗನವಾಡಿ ಕೇಂದ್ರ ದಲ್ಲಿ ಪೌಷ್ಟಿಕ ಆಹಾರ ಸಪ್ತಾಹವನ್ನು ಸೆ. 22ರಂದು ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಜ್ಯೋತಿಯವರು ವಹಿಸಿದ್ದರು. ಪಂಚಾಯತ್ ಸದಸ್ಯೆ ಬಾಲ ವಿಕಾಸ ಸಮಿತಿ ಯ ಸದಸ್ಯೆ ಶ್ರೀಮತಿ ತುಳಸಿ ಉಮೇಶ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಮಾಲಾಡಿ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಪ್ರಿಯಾ ರವರು ಪೌಷ್ಟಿಕ ಆಹಾರದ ಬಗ್ಗೆ ,ಗರ್ಭಿಣಿ ಬಾಣಂತಿಯರ ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ, ಸಮತೋಲನ ಆಹಾರ ಬಳಕೆ ,ಹಸಿರು ಸೊಪ್ಪು ತರಕಾರಿಗಳ ಬಗ್ಗೆ ,ಜೀವಸತ್ವಗಳ ಬಗ್ಗೆ ,ಕುಟುಂಬ ಯೋಜನೆಯ ಬಗ್ಗೆ,ಅವರಿಗೆ ಸಿಗುವಂತಹ ಸೌಲಭ್ಯಗಳಾದ ಮಾತ್ರವಂದನ ,ಭಾಗ್ಯಲಕ್ಷ್ಮಿ ಗಳ ಬಗ್ಗೆ ಉತ್ತಮ ಮಾಹಿತಿಯನ್ನು ನೀಡಿದರು. ಹಾಗೂ ಕಾರ್ಯಕ್ರಮದಲ್ಲಿ ಓರ್ವ ಗರ್ಭಿಣಿ ಮಹಿಳೆಗೆ ಸೀಮಂತನ ಶಾಸ್ತ್ರ ಮತ್ತು ಆರು ತಿಂಗಳ ಒಳಗಿನ ಇಬ್ಬರು ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಸದಸ್ಯರು ,ಮಕ್ಕಳ ತಾಯಂದಿರು ,ಆಶಾ ಕಾರ್ಯಕರ್ತರು ತಯಾರಿಸಿ ತಂದಂತಹ ವಿವಿಧ ಬಗೆಯ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಎಲ್ಲರಿಗೂ ಹಂಚಲಾಯಿತು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಜಯಶ್ರೀ ,ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ,ಮಕ್ಕಳ ಹೆತ್ತವರು , ಅಂಗನವಾಡಿ ಸಹಾಯಕಿ ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪ್ರಭಾವತಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

Suddi Udaya

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!