September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

ಬೆಳ್ತಂಗಡಿ : ಹಲವಾರು ಪ್ರಕರಣ ಸಂಬಂಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವಷ೯ಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ಸೆ.18ರಂದು ಆದೇಶಿಸಲಾಗಿದೆ.

ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣ ವಿವಿಧ ಠಾಣೆಗಳಲ್ಲಿ ದಾಖಲಾಗಿದೆ ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಮಾಡಿ ಆದೇಶ ಮಾಡಲಾಗಿದೆ. ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಪೊಲೀಸರು ಅಥವಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದಾಗ ಜಿಲ್ಲೆಯನ್ನು ಪ್ರವೇಶಿಸಲು ಅವಕಾಶ ನೀಡಲಾಗಿದೆ.ಪೊಲೀಸರ ಪರವಾಗಿ ಡಿಎಸ್ಪಿ ಬಂಟ್ವಾಳ ಮತ್ತು ತಿಮರೋಡಿ ಪರವಾಗಿ ವಕೀಲರು ಪ್ರಕರಣವನ್ನು ಮಂಡಿಸಿದರು. ಸರ್ಕಾರ ಅಥವಾ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶವಿರುತ್ತದೆ.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!