37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

ಬೆಳ್ತಂಗಡಿ: ಆದಿ ದೈವ ಧೂಮಾವತಿ, ದೇಯಿ ಬೈದೇತಿ ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸಂಕೀರ್ತನೆ ಮತ್ತು ನವರಾತ್ರಿ ಉತ್ಸವ ವಿಜೃಂಭಣೆಯಿಂದ ಉಪ್ಪಿನಂಗಡಿಯ ಉದ್ಯಮಿ ಎಮ್ ವರದರಾಜ್ ರವರ ದಿವ್ಯ ಹಸ್ತದಲ್ಲಿ ದೀಪ ಬೆಳಗಿಸುವ ಮುಖಾಂತರ ಪ್ರಾರಂಭಗೊಂಡಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಜಯಂತ ನಡುಬೈಲು, ಶ್ರೀಧರ ಪೂಜಾರಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಮೋಹನ್ ದಾಸ್ ಬಂಗೇರ, ಉಲ್ಲಾಸ್ ಕೋಟ್ಯಾನ್, ಶ್ರೀಮತಿ ಹೇಮಲತಾ ರಘು ಸಾಲಿಯಾನ್, ನಿತೀಶ್ ಕುಮಾರ್ ಶಾಂತಿವನ, ನಾರಾಯಣ ಕುರಿಕಾರ, ಆರ್ ಸಿ ನಾರಾಯಣ, ಆದಿಶಕ್ತಿ ಭಜನಾ ಮಂಡಳಿ ಪಟ್ಟೆಯ ಶ್ರೀಮತಿ ರೇಖ ನಾಗರಾಜ್, ಶ್ರೀಮತಿ ಶಾಲಿನಿ ರವಿ ಪೂಜಾರಿ, ಶ್ರೀ ಜನಾರ್ದನ ಪೂಜಾರಿ ನೂಜಾ, ಮುಂತಾದ ಗಣ್ಯರು ಹಾಜರಿದ್ದರು.

9 ದಿನಗಳ ಕಾಲ ನಿರಂತರ ನಡೆಯುವ ನವರಾತ್ರಿ ಉತ್ಸವದಲ್ಲಿ ಸರ್ವ ಶಕ್ತಿಗಳಿಗೆ ವಿಶೇಷ ಅಲಂಕಾರ, ಅವಳಿ ಮಕ್ಕಳಿಗೆ ಅಕ್ಷರಾಭ್ಯಾಸ, ಅನ್ನಪ್ರಸಾದ ಸೇವೆ, ವಾಹನ ಪೂಜೆ, ಮುಂತಾದ ವಿಶೇಷ ಕಾರ್ಯಕ್ರಮಗಳು ಜರಗಲಿರುವುದು ಎಂದು ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಡಾ. ಕೆಬಿ ರಾಜಾರಾಮ್ ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya
error: Content is protected !!