September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

ಬೆಳ್ತಂಗಡಿ: ಆದಿ ದೈವ ಧೂಮಾವತಿ, ದೇಯಿ ಬೈದೇತಿ ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸಂಕೀರ್ತನೆ ಮತ್ತು ನವರಾತ್ರಿ ಉತ್ಸವ ವಿಜೃಂಭಣೆಯಿಂದ ಉಪ್ಪಿನಂಗಡಿಯ ಉದ್ಯಮಿ ಎಮ್ ವರದರಾಜ್ ರವರ ದಿವ್ಯ ಹಸ್ತದಲ್ಲಿ ದೀಪ ಬೆಳಗಿಸುವ ಮುಖಾಂತರ ಪ್ರಾರಂಭಗೊಂಡಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಜಯಂತ ನಡುಬೈಲು, ಶ್ರೀಧರ ಪೂಜಾರಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಮೋಹನ್ ದಾಸ್ ಬಂಗೇರ, ಉಲ್ಲಾಸ್ ಕೋಟ್ಯಾನ್, ಶ್ರೀಮತಿ ಹೇಮಲತಾ ರಘು ಸಾಲಿಯಾನ್, ನಿತೀಶ್ ಕುಮಾರ್ ಶಾಂತಿವನ, ನಾರಾಯಣ ಕುರಿಕಾರ, ಆರ್ ಸಿ ನಾರಾಯಣ, ಆದಿಶಕ್ತಿ ಭಜನಾ ಮಂಡಳಿ ಪಟ್ಟೆಯ ಶ್ರೀಮತಿ ರೇಖ ನಾಗರಾಜ್, ಶ್ರೀಮತಿ ಶಾಲಿನಿ ರವಿ ಪೂಜಾರಿ, ಶ್ರೀ ಜನಾರ್ದನ ಪೂಜಾರಿ ನೂಜಾ, ಮುಂತಾದ ಗಣ್ಯರು ಹಾಜರಿದ್ದರು.

9 ದಿನಗಳ ಕಾಲ ನಿರಂತರ ನಡೆಯುವ ನವರಾತ್ರಿ ಉತ್ಸವದಲ್ಲಿ ಸರ್ವ ಶಕ್ತಿಗಳಿಗೆ ವಿಶೇಷ ಅಲಂಕಾರ, ಅವಳಿ ಮಕ್ಕಳಿಗೆ ಅಕ್ಷರಾಭ್ಯಾಸ, ಅನ್ನಪ್ರಸಾದ ಸೇವೆ, ವಾಹನ ಪೂಜೆ, ಮುಂತಾದ ವಿಶೇಷ ಕಾರ್ಯಕ್ರಮಗಳು ಜರಗಲಿರುವುದು ಎಂದು ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಡಾ. ಕೆಬಿ ರಾಜಾರಾಮ್ ಸ್ವಾಗತಿಸಿ ವಂದಿಸಿದರು.

Related posts

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ದೇಜಮ್ಮ ನಿಧನ

Suddi Udaya

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya
error: Content is protected !!