22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಬೆಳ್ತಂಗಡಿ: ದೇಯಿಬೈದೈತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸೆ.22 ರಂದು ನವರಾತ್ರಿ ಮಹೋತ್ಸವ ಪ್ರಾರಂಭಗೊಂಡಿತು.
ಪುತ್ತೂರು ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ, ಉದ್ಯಮಿ ವರದರಾಜ ಉಪ್ಪಿನಂಗಡಿ ದೀಪ ಬೆಳಗಿಸಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿ ನವರಾತ್ರಿಯ ಧಾರ್ಮಿಕ ಕಾರ್ಯಕ್ರಮ ನಮ್ಮ ಅಂತರಾತ್ಮವನ್ನು ಬೆಳಗಲಿ ಶ್ರೀ ಕ್ಷೇತ್ರ ಧಾರ್ಮಿಕತೆಯ ಮೂಲಕ ಸಾಮಾಜಿಕ ಜಾಗೃತಿಯ ಕೆಲಸ ಮಾಡುತ್ತಿದೆ ಎಂದರು.

ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರಾದ ರವಿಪೂಜಾರಿ ಪೂಜಾರಿ ಚಿಲಿಂಬಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ನವರಾತ್ರಿಯ ದಿನ ನಿತ್ಯ ಮಹಾ ಮಾತೆ ದೇಯಿ ಬೈದ್ಯೆತಿ ಗೆ ವಿಶೇಷ ಅಲಂಕಾರ ಪೂಜೆ ,ಅನ್ನದಾನ ಸೇವೆ, ವಾಹನ ಪೂಜೆ, ವಿಜಯ ದಶಮಿ ದಿನ ಮಕ್ಕಳಿಗೆ ಅಕ್ಷರಾಭ್ಯಾಸ ಜರಗಲಿದ್ದು ಭಕ್ತಾದಿಗಳು ಮಹಾ ಮಾತೆಯ ಕೃಪೆಗೆ ಪಾತ್ರರಾಗ ಬೇಕು ಎಂದರು.

ಕ್ಷೇತ್ರದ ಶಿವಾನಂದ ತಂತ್ರಿಗಳು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.ಆದಿಶಕ್ತಿ ಮಹಿಳಾ ಭಜನಾ ಸಂಘ ಪಟ್ಟೆ ಇವರಿಂದ ಭಜನಾ ಸಂಕೀರ್ತನೆ ನಡೆಯಿತು.

ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷರಾದ ಪೀತಾಂಬರ ಹೆರಾಜೆ, ಜಯಂತ ನಡುಬೈಲ್ ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ಕೆ.ಬಿ. ಕೋಶಾಧಿಕಾರಿ ಮೋಹನ್ ದಾಸ್ ವಾಮಂಜೂರು,ಟ್ರಸ್ಟಿನ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಸೆಂಟರ್ ಮೆಲ್ಕಾರ್, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್,ಕ್ಷೇತ್ರದ ಮೊಕೇಸರ ಶ್ರೀಧರ ಪೂಜಾರಿ, ಪ್ರಮುಖರಾದ ಆರ್ ಸಿ ನಾರಾಯಣ ನಿತೀಶ್ ಕುಮಾರ್ ಶಾಂತಿವನ, ನಾರಾಯಣ ಕುರಿಕಾರ್, ಮಂಗಳೂರು ಮಾಜಿ ಮೇಯರ್ ಹೇಮಲತಾರಘು ಸಾಲ್ಯಾನ್, ಶಾಲಿನಿ ರವಿ ಪೂಜಾರಿ,ರೇಖಾ ನಾಗರಾಜ್, ಪ್ರದೀಪ ಪೂಜಾರಿ, ಜನಾರ್ಧನ ಪೂಜಾರಿ ನೂಜ,ಮತ್ತಿತರರು ಉಪಸ್ಥಿತರಿದ್ದರು. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.ನೂರಾರು ಭಕ್ತಾಭಿಮಾನಿಗಳು ಭಾಗವಹಿಸಿ ತಾಯಿ ದೇಯಿ ಬೈದ್ಯೆತಿ ಕೃಪೆಗೆ ಪಾತ್ರರಾದರು.

Related posts

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಆರಂಬೋಡಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ 41ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆ: ಅಧ್ಯಕ್ಷರಾಗಿ ಸಂಘಟಕ ಪ್ರಣೀತ್ ಹಿಂಗಾನಿ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya
error: Content is protected !!