25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿ

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

ಬೆಳ್ತಂಗಡಿ : ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಸೆಂಟರ್ ಮತ್ತು ಎಸ್ ಡಿ ಎಂ ಐಟಿ ಉಜಿರೆ ಹಾಗೂ ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆ ಸಹಯೋಗದಲ್ಲಿ ಇಂಜಿನಿಯರ್ಸ್ ಡೇ – 2025 ಕಾರ್ಯಕ್ರಮ ಆಯೋಜಿಸಲಾಯಿತು.

ಬೆಳ್ತಂಗಡಿಯಿಂದ ಎಸ್ ಡಿ ಎಂ ಐಟಿ ವರೆಗೆ ಮೋಟಾರ್ ರ್ಯಾಲಿ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.ಎಸ್ ಡಿ ಎಂ ಐಟಿ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಅತಿಥಿಗಳಿಂದ ದೀಪ ಪ್ರಜ್ವಲನ ಹಾಗೂ ವಿಶ್ವೇಶರಯರಿಗೆ ಪುಷ್ಪಾರ್ಚನೆ ನೆರವೇರಿತು.

ಸ್ವಾಗತ ಭಾಷಣವನ್ನು Er. ತೃಪ್ತಿ ರತನ್ (HOD, SDM ಪಾಲಿಟೆಕ್ನಿಕ್) ಮಾಡಿದರು.ಎಮಿನೆಂಟ್ ಇಂಜಿನಿಯರ್ 2025 ಗೌರವವನ್ನು Er. ಆನಂದ ಭಟ್ ಮತ್ತು Er. ವಿಜಯ ವಿಷ್ಣು ಮಯ್ಯ ಟಿ. ಅವರಿಗೆ ನೀಡಲಾಯಿತು. SDMIT ಮತ್ತು SDM ಪಾಲಿಟೆಕ್ನಿಕ್‌ನ ಶ್ರೇಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೂ ಸನ್ಮಾನ ನೀಡಲಾಯಿತು.

ಪ್ರಾಂಶುಪಾಲರ ಸಂದೇಶದ ನಂತರ Er. ಜಗದೀಶ್ ಪ್ರಸಾದ್ ಎನ್. (ಅಧ್ಯಕ್ಷರು, ACCE[I] ಬೆಳ್ತಂಗಡಿ ಕೇಂದ್ರ) KPCEA 2024 ಕುರಿತ ಮಾಹಿತಿ ಹಂಚಿದರು. ಕಾರ್ಯಕ್ರಮದ ನಿರೂಪಣೆ Dr. ರವೀಶ್ ಪಡುಮಲೆ (HOD, SDM IT, ಉಜಿರೆ) ನಡೆಸಿದರು.

ಕೊನೆಯಲ್ಲಿ Er. ಕೇಶವ್ ವಂದನೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸೆಂಟರ್‌ನ ಅನೇಕ ಇಂಜಿನಿಯರ್‌ಗಳು, SDM ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬುರುಡೆ ಪ್ರಕರಣ ವರದಿಯ ಆದೇಶ ಮತ್ತೆ ಜ.3ಕ್ಕೆ ಮುಂದೂಡಿದ ಕೋರ್ಟ್

Suddi Udaya

ನಾವೂರು: ಯಮುನ ಅಮ್ಮು ಮುಗೇರರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!