25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ : ನಿವೇಶನ ಮಾರಾಟದ ಬಗ್ಗೆ ಅಗ್ರಿಮೆಂಟ್ ಮಾಡಿ ರೂ 45 ಲಕ್ಷ ಹಣ ಪಡೆದುಕೊಂಡು ವಂಚಿಸಿರುವ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರವೀಣ್ ಭಂಡಾರಿ ಹಾಗೂ ಕಲ್ಮಂಜ ನಿವಾಸಿ ಶಾಂತ ಅವರ ವಿರುದ್ದ ಬೆಳ್ತಂಗಡಿ ನಿವಾಸಿ ವಿಶ್ವನಾಥ ರೈ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ವಿಶ್ವನಾಥ್ ರೈ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಲ್ಲಿ ಆರೋಪಿ ಪ್ರವೀಣ್ ಭಂಡಾರಿ ಎಂಬಾತನು ಎರಡನೆ ಶಾಂತಾ ಎಂಬವರಿಂದ ಒಟ್ಟು 40 ಸೆನ್ಸ್ ಜಾಗವನ್ನು ಖರೀದಿ ಮಾಡಿ ಬಳಿಕ ಅದನ್ನು ವಿಶ್ವನಾಥ ರೈ ಅವರಿಗೆ ಮಾರಾಟ ಮಾಡುವುದಾಗಿ ಹೇಳಿ ರೂ 45 ಲಕ್ಷ ಹಣವನ್ನು ಪಡೆದುಕೊಂಡು ಮೂರು ತಿಂಗಳ ಒಳಗೆ ದಾಖಲೆಗಳನ್ನು ಸರಿಪಡಿಸಿ ಬರೆದು ಕೊಡುವುದಾಗಿ 9/1/24 ರಂದು ನೊಂದಾಯಿತ ಕರಾರುಪತ್ರ ಮಾಡಿಕೊಂಡಿದ್ದಾರೆ.

ಇದಾದ ಬಳಿಕ ಜಾಗವನ್ನು ಕ್ರಯಸಾಧನ ಮಾಡಿಕೊಡದೆ ಪಡೆದ ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ ಅಲ್ಲದೆ ಎರಡನೆ ಆಪಾದಿತರಲ್ಲಿ ಈ ಹಿಂದೆ ಮಾಡಿಕೊಂಡಿದ್ದ ಮಾರಾಟ ಕ್ರಯ ಸಾಧನವನ್ನು ರದ್ದು ಪಡಿಸಿದ್ದಾರೆ. ಈ ಮೂಲಕ ಪಡೆದ ಹಣವನ್ನು ಹಿಂತಿರುಗಿಸದೆ ಜಾಗವನ್ನೂ ನೀಡಿದೆ ವಂಚಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ಭಂಡಾರಿ ಮತ್ತು ಶಾಂತ ವಿರುದ್ಧ ಸೆ. 20ರಂದು ಬಿಎನ್.ಎಸ್.u/s 316(2),318(4)ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya
error: Content is protected !!