22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

ಬೆಳ್ತಂಗಡಿ : ನಿವೇಶನ ಮಾರಾಟದ ಬಗ್ಗೆ ಅಗ್ರಿಮೆಂಟ್ ಮಾಡಿ ರೂ 45 ಲಕ್ಷ ಹಣ ಪಡೆದುಕೊಂಡು ವಂಚಿಸಿರುವ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರವೀಣ್ ಭಂಡಾರಿ ಹಾಗೂ ಕಲ್ಮಂಜ ನಿವಾಸಿ ಶಾಂತ ಅವರ ವಿರುದ್ದ ಬೆಳ್ತಂಗಡಿ ನಿವಾಸಿ ವಿಶ್ವನಾಥ ರೈ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ವಿಶ್ವನಾಥ್ ರೈ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಲ್ಲಿ ಆರೋಪಿ ಪ್ರವೀಣ್ ಭಂಡಾರಿ ಎಂಬಾತನು ಎರಡನೆ ಶಾಂತಾ ಎಂಬವರಿಂದ ಒಟ್ಟು 40 ಸೆನ್ಸ್ ಜಾಗವನ್ನು ಖರೀದಿ ಮಾಡಿ ಬಳಿಕ ಅದನ್ನು ವಿಶ್ವನಾಥ ರೈ ಅವರಿಗೆ ಮಾರಾಟ ಮಾಡುವುದಾಗಿ ಹೇಳಿ ರೂ 45 ಲಕ್ಷ ಹಣವನ್ನು ಪಡೆದುಕೊಂಡು ಮೂರು ತಿಂಗಳ ಒಳಗೆ ದಾಖಲೆಗಳನ್ನು ಸರಿಪಡಿಸಿ ಬರೆದು ಕೊಡುವುದಾಗಿ 9/1/24 ರಂದು ನೊಂದಾಯಿತ ಕರಾರುಪತ್ರ ಮಾಡಿಕೊಂಡಿದ್ದಾರೆ.

ಇದಾದ ಬಳಿಕ ಜಾಗವನ್ನು ಕ್ರಯಸಾಧನ ಮಾಡಿಕೊಡದೆ ಪಡೆದ ಹಣವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ ಅಲ್ಲದೆ ಎರಡನೆ ಆಪಾದಿತರಲ್ಲಿ ಈ ಹಿಂದೆ ಮಾಡಿಕೊಂಡಿದ್ದ ಮಾರಾಟ ಕ್ರಯ ಸಾಧನವನ್ನು ರದ್ದು ಪಡಿಸಿದ್ದಾರೆ. ಈ ಮೂಲಕ ಪಡೆದ ಹಣವನ್ನು ಹಿಂತಿರುಗಿಸದೆ ಜಾಗವನ್ನೂ ನೀಡಿದೆ ವಂಚಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ಭಂಡಾರಿ ಮತ್ತು ಶಾಂತ ವಿರುದ್ಧ ಸೆ. 20ರಂದು ಬಿಎನ್.ಎಸ್.u/s 316(2),318(4)ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾ.ಉ. ಸ. ಸಂಘದ ಸದಸ್ಯ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!