23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರವು ಆಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025, ಸೆ. 22ರಿಂದ ಆರಂಭಗೊಂಡಿದ್ದು, ಈ ಸಮೀಕ್ಷೆಗೆ ನಿಯೋಜಿತ ಅಧಿಕಾರಿಗಳಿಂದ ಪ್ರತಿ ಮನೆಗೆ ಯುಹೆಚ್ ಐಡಿ ಸಂಖ್ಯೆ ಅಂಟಿಸಲಾಗಿದ್ದು ದಾಖಲಾತಿ ಕೆಲಸ ಪ್ರಾರಂಭಗೊಂಡಿರುತ್ತದೆ. ಸಮೀಕ್ಷೆದಾರರು ಮನೆಗೆ ಬಂದಾಗ ಸಮಸ್ತ ಒಕ್ಕಲಿಗ ಸಮಾಜದವರು ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ.ನಿರ್ಮಾಲಾನಂದನಾಥ ಮಹಾಸ್ವಾಮೀಜಿಯವರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇವರ ಸೂಚನೆಯಂತೆ ದ.ಕ ಜಿಲ್ಲಾ ಒಕ್ಕಲಿಗ ಗೌಡರ ಸೇವಾಸಂಘ ಇದರ ಆಶಯದಂತೆ ಸಮೀಕ್ಷೆಯ ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು, ಉಪಜಾತಿ ಕಾಲಂನಲ್ಲಿ “ಗೌಡ” ಎಂದೂ, ಮಾತೃಭಾಷೆ ಕಾಲಂನಲ್ಲಿ ಪ್ರಾದೇಶಿಕ ಭಾಷೆಗಳಾದ ಕನ್ನಡ, ತುಳು ಇವುಗಳಲ್ಲಿ ಮಾತೃಭಾಷೆಯನ್ನು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ತಿಳಿಸಿದ್ದಾರೆ.

ಒಕ್ಕಲಿಗ ಗೌಡ ಸಮಾಜದ ಕೋಡ್ ಸಂಖ್ಯೆ ಎ-1541 ಆಗಿದ್ದು, ಇದನ್ನು ಸಹ ಗಮನಿಸಿಕೊಂಡು ನಾವು ಕೊಡುವ ಮಾಹಿತಿ ಪರಿಪೂರ್ಣವಾಗಿರುವಂತೆ ನೋಡಿಕೊಳ್ಳುವುದು ಜವಾಬ್ದಾರಿಯಾಗಿರುತ್ತದೆ. ಏಕೆಂದರೆ ವಕ್ಕಲಿಗ ಎಂಬ ಇನ್ನೊಂದು ಸಮುದಾಯವಿದ್ದು, ಅದರ ಕೋಡ್ ಸಂಖ್ಯೆ ಬೇರೆಯೇ ಆಗಿರುತ್ತದೆ. ಪ್ರತಿಯೊಬ್ಬರು ಒಬ್ಬರಿಗೊಬ್ಬರು ಈ ಮಾಹಿತಿಯನ್ನು ಹಂಚಿಕೊಂಡು ನಮ್ಮ ಸಮಾಜದ ಪ್ರತಿಯೊಬ್ಬರು ಒಂದೇ ರೀತಿಯ ಮಾಹಿತಿಯನ್ನು ನೀಡುವಂತೆ ತಿಳಿಸಿದ್ದಾರೆ.

Related posts

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು: ಎ.ಸಿ.ಪಿ. ನಾಯಕ ಸುಬೇದಾ‌ರ್ ಮೋಹನ್‌ ಗೌಡ ರವರಿಗೆ ಹುಟ್ಟೂರ ಅಭಿನಂದನೆ-ಉಜಿರೆಯಿಂದ ಸ್ವಾಗತ ಮೆರವಣಿಗೆ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya
error: Content is protected !!