23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಜೇಸಿ ಸಪ್ತಾಹ ಅಂಗವಾಗಿ ತರಬೇತಿ ದಿನವನ್ನು ಆಚರಿಸಲಾಯಿತು.

ಉಜಿರೆಯ ಆದಿಗುರು ಕೌಶಲ್ಯ ಕೇಂದ್ರದಲ್ಲಿ ಮಹಿಳೆಯರಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ಉಜಿರೆಯ ರುಡ್‌ಸೆಟ್ ಸಂಸ್ಥೆ ಇಲ್ಲಿ ಉದ್ಯಮ ಕೌಶಲ್ಯದ ಬಗ್ಗೆ ತರಬೇತಿ ಹಮ್ಮಿಕೊಳ್ಳಲಾಯಿತು.

ವಲಯ ತರಬೇತುದಾರ ಪುತ್ತೂರಿನ ಮರಿಕ್ಕೆ ಸಾವಯುವ ಮಳಿಗೆ ಇದರ ಮಾಲಕ ಜೆಸಿಐ ವಲಯ 15ರ ವಲಯ ಉಪಾಧ್ಯಕ್ಷ ಸುಹಾಸ್ ಮರಿಕೆ ಇವರು ತರಬೇತಿ ನಡೆಸಿಕೊಟ್ಟರು.

ಉಜಿರೆ ರುಡ್ ಸೆಟ್ ನ ನಿರ್ದೇಶಕ ಅಜೇಯ, ಉಪನ್ಯಾಸಕ ಜೇಮ್ಸ್ ಅಬ್ರಹಾಂ, ಕರುಣಾಕರ ಜೈನ್, ಬ್ಯೂಟಿ ಪಾರ್ಲರ್ ಅತಿಥಿ ಉಪನ್ಯಾಸಕಿ ಮಾದವಿ ಮನೋಹರ ರೈ ಉಪಸ್ಥಿತರಿದ್ದರು. ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು ಜೇಸಿ ಅದ್ವಿತೀ ಕೆಎಸ್ ಜೇಸಿ ವಾಣಿ ಉದ್ಘೋಷಿಸಿದರು. ರಂಜನ್ ಗುಡಿಗಾರ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಜೆಸಿ ಭವ್ಯಶ್ರೀ ಕೀರ್ತಿರಾಜ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯದರ್ಶಿ ಪ್ರಮೋದ್ ಕೆ ವಂದಿಸಿದರು. ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ಜೇಸಿ ಸದಸ್ಯರು, ಉಪಸ್ಥಿತರಿದ್ದು ಸಹಕರಿಸಿದರು.

Related posts

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya
error: Content is protected !!