September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

ಬೆಳ್ತಂಗಡಿ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ತಿರುವಿನಲ್ಲಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಧರ್ಮಸ್ಥಳ ಪೊಲೀಸ್ ಇಲಾಖಾ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಧರ್ಮಸ್ಥಳ ಪೊಲೀಸ್‌ ಠಾಣಾ ಪಿಎಸ್‌ ಐ ರವರು ಮಂಗಳೂರು ನ್ಯಾಯಾಲಯದಲ್ಲಿ ಸಾಕ್ಷಿ ನುಡಿಯಲು ಇಲಾಖಾ ಬೊಲೆರೋ ಜೀಪ್‌ನಲ್ಲಿ ಚಾಲಕ ರೊಂದಿಗೆ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಬೆಳಗ್ಗೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಟ್ಟೆಮನೆ ನಿವಾಸಿ ಆಕ್ಟಿವಾ ಹೋಂಡಾ ಸವಾರ ಹರ್ಷಿತ್‌ ಎಂಬವರು ಬಿಸಿರೋಡ್‌ ಕಡೆಯಿಂದ ಪುಂಜಾಲಕಟ್ಟೆ ಕಡೆಗೆ ತನ್ನ ಆಕ್ಟಿವಾ ಹೋಂಡಾ ವನ್ನು ಹೆದ್ದಾರಿಯಲ್ಲಿ ಚಲಾಯಿಸಿಕೊಂಡು ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಟ್ಟೆಮನೆ ರಾಷ್ಟ್ರೀಯ ಹೆದ್ದಾರಿ -73 ರಲ್ಲಿ ತಿರುವಿನಲ್ಲಿ ಸವಾರನ ನಿಯಂತ್ರಣ ತಪ್ಪಿ ಇಲಾಖಾ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದು ಆಕ್ಟಿವಾ ಹೋಂಡಾ ಸಮೇತ ರಸ್ತೆಗೆ ಬಿದ್ದು ತಲೆಗೆ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್‌ ನಲ್ಲಿ ಮಂಗಳೂರು ಆಸ್ಪತ್ರೆಗೆ ಕಳುಹಿಸಿಕೊಟ್ಟಿರುವುದಾಗಿದೆ.


ಈ ಬಗ್ಗೆ ಸ್ಕೂಟಿ ಸವಾರರ ಸಂಬಂಧಿಕರಿಂದ ದೂರು ಪಡೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Related posts

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ನವೀಕೃತಗೊಂಡ ಆರೋಗ್ಯ ವಿಮಾ ಯೋಜನೆಯ ವಿಭಾಗ ಲೋಕಾರ್ಪಣೆ     

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಹೊಟೇಲ್ ಗೆ ಬಂದು ಕುಟುಂಬ ಸದಸ್ಯರಿಗೆ ಹಲ್ಲೆ: ಐದು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya
error: Content is protected !!