July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಬಾರ್ಯ : ಕನಸು ಸಂಜೀವಿನಿ ಮಹಿಳಾ ಒಕ್ಕೂಟ ಬಾರ್ಯ ಇದರ 2024-2025 ಸಾಲಿನ ವಾರ್ಷಿಕ ಮಹಾಸಭೆಯನ್ನು ಸೆ.23 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಸೂದ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯನ್ನು ಉದ್ದೇಶಿಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿಕೆ ಉಸ್ಮಾನ್ ರವರು ಹಿತನುಡಿಗಳನ್ನಡಿದರು. ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಸಂಜೀವಿನಿ ಯೋಜನೆಯ ದ್ಯೆಯೋದ್ದೇಶ ಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಸದಸ್ಯರಿಗೆ ಮನಮುಟ್ಟುವಂತೆ ನೀಡಿದರು. ನಿಶಾ ರವರು ವಾರ್ಷಿಕ ವರದಿಯನ್ನು ಹಾಗೂ ಶಾಸನಬದ್ಧ ಲೆಕ್ಕಪರಿಶೋಧನವರದಿಯನ್ನು ಮಂಡಿಸಿದರು.

ಬಾರ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ-ಸ್ವಚ್ಛತೆಯೇ ಸೇವೆ ಪಾಕ್ಷಿಕ 2025 ರ ಅಭಿಯಾನದಡಿ ಕನಸು ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು . ಕಾರ್ಯಕ್ರಮವನ್ನು ಉದ್ದೇಶಿಸಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಸೂದ ರವರು ಸಂಜೀವಿನಿ ಯೋಜನೆಯ ಬಗ್ಗೆ ಮಾತನಾಡಿ ಶುಭ ಹಾರೈಸಿದರು.

ಸಭೆಯಲ್ಲಿ ಸ್ವಸ್ತಿಕ್ ಇವರು ಮಾದಕ ಮುಕ್ತ ಕರ್ನಾಟಕ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ಒಕ್ಕೂಟದ ಸಿಬ್ಬಂದಿ ಗಳು ಪ್ರಾರ್ಥಿಸಿ, ಶರ್ಮಿಳಾ ಸ್ವಾಗತಿಸಿ, ನಿಶಾ ಕಾರ್ಯಕ್ರಮವನ್ನು ನಿರೂಪಿಸಿ , ಪಶು ಸಖಿ ಲಲಿತಾ ಬಿ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ನಿವೃತ್ತ ಸಾಧಕ ಯೋಧ ಪ್ರಶಸ್ತಿ ಸ್ವೀಕರಿಸಿ ಆಗಮಿಸಿದ ಲ| ಡಾ.ಗೋಪಾಲಕೃಷ್ಣ ಕಾಂಚೋಡು: ಉಜಿರೆಯಲ್ಲಿ ಭವ್ಯವಾದ ಸ್ವಾಗತ – ಅಭಿನಂದನೆ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya
error: Content is protected !!