ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಬಾರ್ಯ : ಕನಸು ಸಂಜೀವಿನಿ ಮಹಿಳಾ ಒಕ್ಕೂಟ ಬಾರ್ಯ ಇದರ 2024-2025 ಸಾಲಿನ ವಾರ್ಷಿಕ ಮಹಾಸಭೆಯನ್ನು ಸೆ.23 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಸೂದ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯನ್ನು ಉದ್ದೇಶಿಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಿಕೆ ಉಸ್ಮಾನ್ ರವರು ಹಿತನುಡಿಗಳನ್ನಡಿದರು. ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಸಂಜೀವಿನಿ ಯೋಜನೆಯ ದ್ಯೆಯೋದ್ದೇಶ ಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಸದಸ್ಯರಿಗೆ ಮನಮುಟ್ಟುವಂತೆ ನೀಡಿದರು. ನಿಶಾ ರವರು ವಾರ್ಷಿಕ ವರದಿಯನ್ನು ಹಾಗೂ ಶಾಸನಬದ್ಧ ಲೆಕ್ಕಪರಿಶೋಧನವರದಿಯನ್ನು ಮಂಡಿಸಿದರು.

ಬಾರ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ-ಸ್ವಚ್ಛತೆಯೇ ಸೇವೆ ಪಾಕ್ಷಿಕ 2025 ರ ಅಭಿಯಾನದಡಿ ಕನಸು ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು . ಕಾರ್ಯಕ್ರಮವನ್ನು ಉದ್ದೇಶಿಸಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಸೂದ ರವರು ಸಂಜೀವಿನಿ ಯೋಜನೆಯ ಬಗ್ಗೆ ಮಾತನಾಡಿ ಶುಭ ಹಾರೈಸಿದರು.

ಸಭೆಯಲ್ಲಿ ಸ್ವಸ್ತಿಕ್ ಇವರು ಮಾದಕ ಮುಕ್ತ ಕರ್ನಾಟಕ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ಒಕ್ಕೂಟದ ಸಿಬ್ಬಂದಿ ಗಳು ಪ್ರಾರ್ಥಿಸಿ, ಶರ್ಮಿಳಾ ಸ್ವಾಗತಿಸಿ, ನಿಶಾ ಕಾರ್ಯಕ್ರಮವನ್ನು ನಿರೂಪಿಸಿ , ಪಶು ಸಖಿ ಲಲಿತಾ ಬಿ ಧನ್ಯವಾದವಿತ್ತರು.

Related posts

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಒಂದು ದಿನದ ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ: ಕಲಿಕೆಯ ನಿಖರತೆಗೆ ಅತ್ಯಾಧುನಿಕ ಮೌಲ್ಯಮಾಪನ ಪೂರಕ: ಎಸ್. ಎನ್. ಕಾಕತ್ಕರ್

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಡಾ.ಅಣ್ಣಯ್ಯ ಕುಲಾಲ್‌ರಿಂದ ‘ಸಿರಿಂಜ್ ಹಿಡಿದ ಕೈ ಪೆನ್ನು ಹಿಡಿದಾಗ’ ಕೃತಿ ಡಾ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

Suddi Udaya
error: Content is protected !!