32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

ಬೆಳ್ತಂಗಡಿ : ಹಲವಾರು ಪ್ರಕರಣ ಸಂಬಂಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವಷ೯ಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ಸೆ.18ರಂದು ಆದೇಶಿಸಲಾಗಿದೆ.

ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣ ವಿವಿಧ ಠಾಣೆಗಳಲ್ಲಿ ದಾಖಲಾಗಿದೆ ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಮಾಡಿ ಆದೇಶ ಮಾಡಲಾಗಿದೆ. ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಪೊಲೀಸರು ಅಥವಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದಾಗ ಜಿಲ್ಲೆಯನ್ನು ಪ್ರವೇಶಿಸಲು ಅವಕಾಶ ನೀಡಲಾಗಿದೆ.ಪೊಲೀಸರ ಪರವಾಗಿ ಡಿಎಸ್ಪಿ ಬಂಟ್ವಾಳ ಮತ್ತು ತಿಮರೋಡಿ ಪರವಾಗಿ ವಕೀಲರು ಪ್ರಕರಣವನ್ನು ಮಂಡಿಸಿದರು. ಸರ್ಕಾರ ಅಥವಾ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶವಿರುತ್ತದೆ.

Related posts

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya
error: Content is protected !!