September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

ಬೆಳ್ತಂಗಡಿ: ಆದಿ ದೈವ ಧೂಮಾವತಿ, ದೇಯಿ ಬೈದೇತಿ ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸಂಕೀರ್ತನೆ ಮತ್ತು ನವರಾತ್ರಿ ಉತ್ಸವ ವಿಜೃಂಭಣೆಯಿಂದ ಉಪ್ಪಿನಂಗಡಿಯ ಉದ್ಯಮಿ ಎಮ್ ವರದರಾಜ್ ರವರ ದಿವ್ಯ ಹಸ್ತದಲ್ಲಿ ದೀಪ ಬೆಳಗಿಸುವ ಮುಖಾಂತರ ಪ್ರಾರಂಭಗೊಂಡಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಜಯಂತ ನಡುಬೈಲು, ಶ್ರೀಧರ ಪೂಜಾರಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ, ಮೋಹನ್ ದಾಸ್ ಬಂಗೇರ, ಉಲ್ಲಾಸ್ ಕೋಟ್ಯಾನ್, ಶ್ರೀಮತಿ ಹೇಮಲತಾ ರಘು ಸಾಲಿಯಾನ್, ನಿತೀಶ್ ಕುಮಾರ್ ಶಾಂತಿವನ, ನಾರಾಯಣ ಕುರಿಕಾರ, ಆರ್ ಸಿ ನಾರಾಯಣ, ಆದಿಶಕ್ತಿ ಭಜನಾ ಮಂಡಳಿ ಪಟ್ಟೆಯ ಶ್ರೀಮತಿ ರೇಖ ನಾಗರಾಜ್, ಶ್ರೀಮತಿ ಶಾಲಿನಿ ರವಿ ಪೂಜಾರಿ, ಶ್ರೀ ಜನಾರ್ದನ ಪೂಜಾರಿ ನೂಜಾ, ಮುಂತಾದ ಗಣ್ಯರು ಹಾಜರಿದ್ದರು.

9 ದಿನಗಳ ಕಾಲ ನಿರಂತರ ನಡೆಯುವ ನವರಾತ್ರಿ ಉತ್ಸವದಲ್ಲಿ ಸರ್ವ ಶಕ್ತಿಗಳಿಗೆ ವಿಶೇಷ ಅಲಂಕಾರ, ಅವಳಿ ಮಕ್ಕಳಿಗೆ ಅಕ್ಷರಾಭ್ಯಾಸ, ಅನ್ನಪ್ರಸಾದ ಸೇವೆ, ವಾಹನ ಪೂಜೆ, ಮುಂತಾದ ವಿಶೇಷ ಕಾರ್ಯಕ್ರಮಗಳು ಜರಗಲಿರುವುದು ಎಂದು ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಡಾ. ಕೆಬಿ ರಾಜಾರಾಮ್ ಸ್ವಾಗತಿಸಿ ವಂದಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya
error: Content is protected !!