24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಬೆಳ್ತಂಗಡಿ: ದೇಯಿಬೈದೈತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸೆ.22 ರಂದು ನವರಾತ್ರಿ ಮಹೋತ್ಸವ ಪ್ರಾರಂಭಗೊಂಡಿತು.
ಪುತ್ತೂರು ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ, ಉದ್ಯಮಿ ವರದರಾಜ ಉಪ್ಪಿನಂಗಡಿ ದೀಪ ಬೆಳಗಿಸಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿ ನವರಾತ್ರಿಯ ಧಾರ್ಮಿಕ ಕಾರ್ಯಕ್ರಮ ನಮ್ಮ ಅಂತರಾತ್ಮವನ್ನು ಬೆಳಗಲಿ ಶ್ರೀ ಕ್ಷೇತ್ರ ಧಾರ್ಮಿಕತೆಯ ಮೂಲಕ ಸಾಮಾಜಿಕ ಜಾಗೃತಿಯ ಕೆಲಸ ಮಾಡುತ್ತಿದೆ ಎಂದರು.

ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರಾದ ರವಿಪೂಜಾರಿ ಪೂಜಾರಿ ಚಿಲಿಂಬಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ನವರಾತ್ರಿಯ ದಿನ ನಿತ್ಯ ಮಹಾ ಮಾತೆ ದೇಯಿ ಬೈದ್ಯೆತಿ ಗೆ ವಿಶೇಷ ಅಲಂಕಾರ ಪೂಜೆ ,ಅನ್ನದಾನ ಸೇವೆ, ವಾಹನ ಪೂಜೆ, ವಿಜಯ ದಶಮಿ ದಿನ ಮಕ್ಕಳಿಗೆ ಅಕ್ಷರಾಭ್ಯಾಸ ಜರಗಲಿದ್ದು ಭಕ್ತಾದಿಗಳು ಮಹಾ ಮಾತೆಯ ಕೃಪೆಗೆ ಪಾತ್ರರಾಗ ಬೇಕು ಎಂದರು.

ಕ್ಷೇತ್ರದ ಶಿವಾನಂದ ತಂತ್ರಿಗಳು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.ಆದಿಶಕ್ತಿ ಮಹಿಳಾ ಭಜನಾ ಸಂಘ ಪಟ್ಟೆ ಇವರಿಂದ ಭಜನಾ ಸಂಕೀರ್ತನೆ ನಡೆಯಿತು.

ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷರಾದ ಪೀತಾಂಬರ ಹೆರಾಜೆ, ಜಯಂತ ನಡುಬೈಲ್ ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ಕೆ.ಬಿ. ಕೋಶಾಧಿಕಾರಿ ಮೋಹನ್ ದಾಸ್ ವಾಮಂಜೂರು,ಟ್ರಸ್ಟಿನ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಸೆಂಟರ್ ಮೆಲ್ಕಾರ್, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್,ಕ್ಷೇತ್ರದ ಮೊಕೇಸರ ಶ್ರೀಧರ ಪೂಜಾರಿ, ಪ್ರಮುಖರಾದ ಆರ್ ಸಿ ನಾರಾಯಣ ನಿತೀಶ್ ಕುಮಾರ್ ಶಾಂತಿವನ, ನಾರಾಯಣ ಕುರಿಕಾರ್, ಮಂಗಳೂರು ಮಾಜಿ ಮೇಯರ್ ಹೇಮಲತಾರಘು ಸಾಲ್ಯಾನ್, ಶಾಲಿನಿ ರವಿ ಪೂಜಾರಿ,ರೇಖಾ ನಾಗರಾಜ್, ಪ್ರದೀಪ ಪೂಜಾರಿ, ಜನಾರ್ಧನ ಪೂಜಾರಿ ನೂಜ,ಮತ್ತಿತರರು ಉಪಸ್ಥಿತರಿದ್ದರು. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.ನೂರಾರು ಭಕ್ತಾಭಿಮಾನಿಗಳು ಭಾಗವಹಿಸಿ ತಾಯಿ ದೇಯಿ ಬೈದ್ಯೆತಿ ಕೃಪೆಗೆ ಪಾತ್ರರಾದರು.

Related posts

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!