25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಬೆಳ್ತಂಗಡಿ: ದೇಯಿಬೈದೈತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸೆ.22 ರಂದು ನವರಾತ್ರಿ ಮಹೋತ್ಸವ ಪ್ರಾರಂಭಗೊಂಡಿತು.
ಪುತ್ತೂರು ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ, ಉದ್ಯಮಿ ವರದರಾಜ ಉಪ್ಪಿನಂಗಡಿ ದೀಪ ಬೆಳಗಿಸಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿ ನವರಾತ್ರಿಯ ಧಾರ್ಮಿಕ ಕಾರ್ಯಕ್ರಮ ನಮ್ಮ ಅಂತರಾತ್ಮವನ್ನು ಬೆಳಗಲಿ ಶ್ರೀ ಕ್ಷೇತ್ರ ಧಾರ್ಮಿಕತೆಯ ಮೂಲಕ ಸಾಮಾಜಿಕ ಜಾಗೃತಿಯ ಕೆಲಸ ಮಾಡುತ್ತಿದೆ ಎಂದರು.

ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರಾದ ರವಿಪೂಜಾರಿ ಪೂಜಾರಿ ಚಿಲಿಂಬಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ನವರಾತ್ರಿಯ ದಿನ ನಿತ್ಯ ಮಹಾ ಮಾತೆ ದೇಯಿ ಬೈದ್ಯೆತಿ ಗೆ ವಿಶೇಷ ಅಲಂಕಾರ ಪೂಜೆ ,ಅನ್ನದಾನ ಸೇವೆ, ವಾಹನ ಪೂಜೆ, ವಿಜಯ ದಶಮಿ ದಿನ ಮಕ್ಕಳಿಗೆ ಅಕ್ಷರಾಭ್ಯಾಸ ಜರಗಲಿದ್ದು ಭಕ್ತಾದಿಗಳು ಮಹಾ ಮಾತೆಯ ಕೃಪೆಗೆ ಪಾತ್ರರಾಗ ಬೇಕು ಎಂದರು.

ಕ್ಷೇತ್ರದ ಶಿವಾನಂದ ತಂತ್ರಿಗಳು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.ಆದಿಶಕ್ತಿ ಮಹಿಳಾ ಭಜನಾ ಸಂಘ ಪಟ್ಟೆ ಇವರಿಂದ ಭಜನಾ ಸಂಕೀರ್ತನೆ ನಡೆಯಿತು.

ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷರಾದ ಪೀತಾಂಬರ ಹೆರಾಜೆ, ಜಯಂತ ನಡುಬೈಲ್ ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ಕೆ.ಬಿ. ಕೋಶಾಧಿಕಾರಿ ಮೋಹನ್ ದಾಸ್ ವಾಮಂಜೂರು,ಟ್ರಸ್ಟಿನ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಸೆಂಟರ್ ಮೆಲ್ಕಾರ್, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್,ಕ್ಷೇತ್ರದ ಮೊಕೇಸರ ಶ್ರೀಧರ ಪೂಜಾರಿ, ಪ್ರಮುಖರಾದ ಆರ್ ಸಿ ನಾರಾಯಣ ನಿತೀಶ್ ಕುಮಾರ್ ಶಾಂತಿವನ, ನಾರಾಯಣ ಕುರಿಕಾರ್, ಮಂಗಳೂರು ಮಾಜಿ ಮೇಯರ್ ಹೇಮಲತಾರಘು ಸಾಲ್ಯಾನ್, ಶಾಲಿನಿ ರವಿ ಪೂಜಾರಿ,ರೇಖಾ ನಾಗರಾಜ್, ಪ್ರದೀಪ ಪೂಜಾರಿ, ಜನಾರ್ಧನ ಪೂಜಾರಿ ನೂಜ,ಮತ್ತಿತರರು ಉಪಸ್ಥಿತರಿದ್ದರು. ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.ನೂರಾರು ಭಕ್ತಾಭಿಮಾನಿಗಳು ಭಾಗವಹಿಸಿ ತಾಯಿ ದೇಯಿ ಬೈದ್ಯೆತಿ ಕೃಪೆಗೆ ಪಾತ್ರರಾದರು.

Related posts

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya
error: Content is protected !!