25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಕೊಯ್ಯೂರು ಗ್ರಾಮ ಪಂಚಾಯತ್ ಮಟ್ಟದ ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟ ಇದರ ಮಹಾಸಭೆಯನ್ನು ಸೆ. 23ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆದೂರುಪೆರಾಲ್ ಕೊಯ್ಯೂರು ಇಲ್ಲಿ ಶ್ರೀಮತಿ ಅಶ್ವಿನಿರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರು ಸೇರಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀಮತಿ ಶುಭಲಕ್ಷ್ಮಿರವರು 2024-25 ರ ವಾರ್ಷಿಕ ವರದಿ ಮತ್ತು ಜಮಾ ಖರ್ಚು ಮಂಡಿಸಿದರು. ಪಂಚಾಯತ್ ಅಧ್ಯಕ್ಷರು ಈ ಸಭೆಯನ್ನು ಉದೇಶಿಸಿ ಎಲ್ಲರಿಗೂ ‌ಶುಭ ಹಾರೈಸಿದರು. ಸಂಜೀವಿನಿ ಒಕ್ಕೂಟ ಕೊಡಮಾಡುವ ಸಮುದಾಯ ಬಂಡವಾಳ ನಿಧಿಯಿಂದ ಸಂಜೀವಿನಿ ಮಹಿಳೆಯರು ವಿವಿಧ ಆಹಾರೋತ್ಪನ್ನ ಚಟುವಟಿಕೆ ನಡೆಸಬೇಕು. ಆರ್ಥಿಕ ಮಟ್ಟ‌ ಏರಿಕೆಯಾಗಬೇಕು‌ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಹಿತನುಡಿದರು. ನೂತನ ಪದಾದಿಕಾರಿ ಆಯ್ಕೆ ಮಾಡಲಾಯಿತು.

ತಾಲೂಕಿನ ಸಂಪನ್ಮೂಲ ವ್ಯಕ್ತಿ( BRP- PRI) ಯಾದ ಶ್ರೀಮತಿ ಶ್ರೀಕಲಾ ಹಾಗೂ ಮಾದಕ ಮುಕ್ತ ಕರ್ನಾಟಕ ಪ್ರತಿಜ್ಞಾ ವಿಧಿಯನ್ನು ಮಾಡಿಸಿದರು. ಸಿಹೆಚ್ ಒ ಗೀತಾ ಬಿ ಲಿಂಗತ್ವಾಧಾರಿತ ದೌರ್ಜನ್ಯ, ಬಾಲ್ಯ ವಿವಾಹ , ಹೀಗೆ ಹಲವಾರು ಮಾಹಿತಿ ನೀಡಿದರು.

ವಲಯ ಮೇಲ್ವಚಾರಕಾರಾದ ಜಯಾನಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM) ಬಗ್ಗೆ ಸಂಪೂರ್ಣ ಸಮಗ್ರವಾದ ಮಾಹಿತಿಯನ್ನು ನೀಡಿದರು.ಆರ್ಥಿಕ ಸಾಕ್ಷರತೆ ಕೇಂದ್ರದ ಸಮಾಲೋಚಕಿ‌ ಉಷಾ ಕಾಮತ್ ಇನ್ಸೂರೆನ್ಸ್ ಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು‌ ಹಾಗೂ‌ ಸದಸ್ಯರು ಬೆಳೆದಿರುವ ತರಕಾರಿಗಳು, ಆಹಾರೋತ್ಪನ್ನ‌ ವಸ್ತುಗಳು, ಕೈಯಲ್ಲಿ‌ ತಯಾರಿಸಿದ ಕರಕುಶಲ ವಸ್ತುಗಳಾದ ಹೂವು ಬ್ಯಾಗ್ ಗಳನ್ನು ಪ್ರದರ್ಶನ‌ ಮಾಡಿ ಮಾರಾಟ ಮಾಡಲಾಯಿತು. ಮಹಾಸಭೆಯ ಲಕ್ಕಿ ಮಹಿಳೆ ಆಯ್ಕೆ ಮಾಡಿ‌ ಬಹುಮಾನಿತರಿಗೆ ಬಹುಮಾನ‌ ನೀಡಿ ಗೌರವಿಸಲಾಯಿತು.

ಶ್ರೀಮತಿ ಪೂರ್ಣಿಮಾ ಸ್ವಾಗತಿಸಿದರು. ತುಳಸಿ ಸಂಜೀವಿನಿ ಸಂಘದ ಸದಸ್ಯೆ ಸುನಂದ ಧನ್ಯವಾದವಿತ್ತರು.

Related posts

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya
error: Content is protected !!