July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

ಬೆಳ್ತಂಗಡಿ: ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪನವರು ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.

ಜುಲೈ 25 ರಂದು ಬೆಂಗಳೂರಿನಲ್ಲಿ ಶ್ರೀ ವಿಶ್ವೇಶ್ವರ ಭಟ್ ಅವರ ನೂರನೆ ಕೃತಿ ಬಿಡುಗಡೆ ಸಮಾರಂಭದಲ್ಲಿ ನಾವು ಜೊತೆಯಾಗಿ ಭಾಗವಹಿಸಿದ್ದು ಆತ್ಮೀಯವಾಗಿ ಮಾತನಾಡಿದ್ದೆವು. ಅದು ನಮ್ಮ ಕೊನೆಯ ಭೇಟಿಯಾಗಿತ್ತು. ನೇರ ನಡೆ-ನುಡಿಯ ಸರಳ ವ್ಯಕ್ತಿತ್ವವನ್ನು ಹೊಂದಿದ್ದ ಅವರು ಕನ್ನಡ ನಾಡು-ನುಡಿ, ಸಂಸ್ಕೃತಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ.

ಅವರ ಅನೇಕ ಕಾದಂಬರಿಗಳು ಹಾಗೂ ಸಾಹಿತ್ಯ ಕೃತಿಗಳು ಹಲವು ಬಾರಿ ಮರು ಮುದ್ರಣಗೊಂಡಿರುವುದಲ್ಲದೆ ಇತರ ಭಾಷೆಗಳಿಗೂ ಭಾಷಾಂತರಗೊಂಡಿವೆ. ಅವರ ಹೆಚ್ಚಿನ ಕೃತಿಗಳನ್ನು ನಾನು ಆಸಕ್ತಿಯಿಂದ ಓದಿದ್ದೇನೆ.1981ರ ನವೆಂಬರ್ 26 ರಂದು ಗುರುವಾರ ಲಕ್ಷದೀಪೋತ್ಸವ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಅವರು ಅಧ್ಯಕ್ಷತೆ ವಹಿಸಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ.

Related posts

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಮನೋಹರ್ ಬಳಂಜ ಪುನರಾಯ್ಕೆ

Suddi Udaya
error: Content is protected !!