September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

ಬೆಳ್ತಂಗಡಿ ತಾಲೂಕಿನ ಕೃಷಿಯೇತರ ಪತ್ತಿನ ಸಹಕಾರ ಸಂಘಗಳು ಮತ್ತು ವಿವಿಧೋದ್ಧೇಶ ಸಹಕಾರ ಸಂಘಗಳ ಒಟ್ಟುಗೂಡುವಿಕೆಯಲ್ಲಿ ಭವಿಷ್ಯದಲ್ಲಿ ಭದ್ರ ಸಹಕಾರ ಸಂಘದ ಬೆಳವಣಿಗೆÀಗೆÀ ಪೂರಕವಾದ ನಿಯಮಗಳನ್ನು ಜಾರಿಗೊಳಿಸಬೇಕೆನ್ನುವ ಸದುದ್ದೇಶವನ್ನು ಇಟ್ಟುಕೊಂಡು ಪ್ರಾರಂಭಗೊAಡಿರುವ ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಬೆಳ್ತಂಗಡಿ ತಾಲೂಕು ಇತ್ತೀಚಿಗೆ ಸಹಕಾರ ಸಂಘಗಳ ಕಾಯ್ದೆಗಳಿಗೆ ಮಾಡಿರುವ ತಿದ್ದುಪಡಿಯಿಂದ ಉಂಟಾಗುವ ಪರಿಣಾಮಗಳ ಕುರಿತಾದ ಸಭೆಯು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಸೆ.೨೩ ರಂದು ನಡೆಯಿತು. ಹಿತರಕ್ಷಣಾ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ ಇವರನ್ನು ಆಯ್ಕೆ ಮಾಡಲಾಯಿತು.


ಅಧ್ಯಕ್ಷ ಭಗೀರಥ ಜಿ ಮಾತನಾಡಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮಕ್ಕೆ ಮಾಡಿರುವ ಕೆಲವೊಂದು ತಿದ್ದುಪಡಿಗಳಿಂದ ಸಹಕಾರ ಸಂಘಗಳ ಮುಂದಿನ ಬೆಳವಣಿಗೆ ಅತ್ಯಂತ ಕಷ್ಟಕರವಾಗಿದ್ದು ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಹಿತರಕ್ಷಣಾ ವೇದಿಕೆಯ ಮುಂದಿನ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಹಿತರಕ್ಷಣಾ ವೇದಿಕೆಯ ಸದಸ್ಯ ಸಂಘಗಳಿಗೆ ಸದಸ್ಯತ್ವ ಶುಲ್ಕ ನಿಗದಿಪಡಿಸಿ ಬಾಕಿ ಉಳಿದಿರುವ ಸಹಕಾರ ಸಂಘಗಳನ್ನು ಸದಸ್ಯರನ್ನಾಗಿ ಮಾಡುವುದಾಗಿ ನಿರ್ಣಯಿಸಲಾಯಿತು. ಸದಸ್ಯ ಸಹಕಾರ ಸಂಘಗಳಿಗೆ ಸಮಸ್ಯೆಗಳು ಉಂಟಾದಾಗ ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.
ಹಿತರಕ್ಷಣಾ ವೇದಿಕೆಯ ಉಪಾಧ್ಯಾಕ್ಷ ಡಾ.ಜಯಕೀರ್ತಿ ಜೈನ್, ಕಾರ್ಯದರ್ಶಿ ಅಶ್ವಥ್ ಕುಮಾರ್, ಜೊತೆ ಕಾರ್ಯದರ್ಶಿ ಸುಜಯ್ ಶೆಟ್ಟಿ, ಹಿತರಕ್ಷಣಾ ವೇದಿಕೆಯ ಸದಸ್ಯ ಸಂಘಗಳ ಅಧ್ಯಕ್ಷರುಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya
error: Content is protected !!