22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮಂಗಳೂರಿನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಿ.ಧರ್ಮಯ್ಯ(೭೧) ಅವರು ಮಂಗಳೂರು ಬೆಂದೂರುವೆಲ್‌ನ ತಮ್ಮ ಮನೆಯಲ್ಲಿ ಸೆ.೨೪ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

ಮೂಲತಃ ಹಾಸನ ಸಕಲೇಶಪುರ ಹೊಸೂರಿನವರಾಗಿದ್ದಅವರು ಮೈಸೂರಿನಲ್ಲಿ ಎಸ್‌ ಐ ಆಗಿ ಸೇವೆ ಪ್ರಾರಂಭಿಸಿ, ಬಳಿಕ ಯಳಂದೂರು, ಚಾಮರಾಜನಗರ, ವಿರಾಜಪೇಟೆ, ಸರ್ಕಲ್‌ ಇನ್‌ಸ್ಪೆಕ್ಟರ್‌ ಆಗಿ ಬೆಳ್ತಂಗಡಿ, ಕಾರ್ಕಳ, ಉಡುಪಿ, ಬಳಿಕ ಡಿವೈಎಸ್‌ಪಿಯಾಗಿ ಕಾರ್ಯನಿರ್ವಹಿಸಿದರು. ನಂತರ ಬೆಂಗಳೂರಿನಲ್ಲಿ ಎಸಿಪಿಯಾಗಿ ಮತ್ತೆ ಮಂಗಳೂರಿನಲ್ಲಿ ಡಿಸಿಪಿ(ಅಪರಾಧ-ಸಂಚಾರ) ವಿಭಾಗದಲ್ಲಿ ಸೇವೆ ಸಲ್ಲಿಸಿ, ೨೦೧೩ರಲ್ಲಿ ಸೇವಾ ನಿವೃತ್ತರಾಗಿದ್ದರು. ನಿವೃತ್ತರಾಗಿ ಮಂಗಳೂರಿನಲ್ಲೇ ನೆಲೆಸಿದ್ದರು.ಅವರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು, ನಾಲ್ಕು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya
error: Content is protected !!