September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮಂಗಳೂರಿನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಿ.ಧರ್ಮಯ್ಯ(೭೧) ಅವರು ಮಂಗಳೂರು ಬೆಂದೂರುವೆಲ್‌ನ ತಮ್ಮ ಮನೆಯಲ್ಲಿ ಸೆ.೨೪ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

ಮೂಲತಃ ಹಾಸನ ಸಕಲೇಶಪುರ ಹೊಸೂರಿನವರಾಗಿದ್ದಅವರು ಮೈಸೂರಿನಲ್ಲಿ ಎಸ್‌ ಐ ಆಗಿ ಸೇವೆ ಪ್ರಾರಂಭಿಸಿ, ಬಳಿಕ ಯಳಂದೂರು, ಚಾಮರಾಜನಗರ, ವಿರಾಜಪೇಟೆ, ಸರ್ಕಲ್‌ ಇನ್‌ಸ್ಪೆಕ್ಟರ್‌ ಆಗಿ ಬೆಳ್ತಂಗಡಿ, ಕಾರ್ಕಳ, ಉಡುಪಿ, ಬಳಿಕ ಡಿವೈಎಸ್‌ಪಿಯಾಗಿ ಕಾರ್ಯನಿರ್ವಹಿಸಿದರು. ನಂತರ ಬೆಂಗಳೂರಿನಲ್ಲಿ ಎಸಿಪಿಯಾಗಿ ಮತ್ತೆ ಮಂಗಳೂರಿನಲ್ಲಿ ಡಿಸಿಪಿ(ಅಪರಾಧ-ಸಂಚಾರ) ವಿಭಾಗದಲ್ಲಿ ಸೇವೆ ಸಲ್ಲಿಸಿ, ೨೦೧೩ರಲ್ಲಿ ಸೇವಾ ನಿವೃತ್ತರಾಗಿದ್ದರು. ನಿವೃತ್ತರಾಗಿ ಮಂಗಳೂರಿನಲ್ಲೇ ನೆಲೆಸಿದ್ದರು.ಅವರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು, ನಾಲ್ಕು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya
error: Content is protected !!