25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಕೊಯ್ಯೂರು ಗ್ರಾಮ ಪಂಚಾಯತ್ ಮಟ್ಟದ ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟ ಇದರ ಮಹಾಸಭೆಯನ್ನು ಸೆ. 23ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆದೂರುಪೆರಾಲ್ ಕೊಯ್ಯೂರು ಇಲ್ಲಿ ಶ್ರೀಮತಿ ಅಶ್ವಿನಿರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಪಂಚಾಯತ್ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ವೇದಿಕೆಯಲ್ಲಿರುವ ಎಲ್ಲಾ ಗಣ್ಯರು ಸೇರಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀಮತಿ ಶುಭಲಕ್ಷ್ಮಿರವರು 2024-25 ರ ವಾರ್ಷಿಕ ವರದಿ ಮತ್ತು ಜಮಾ ಖರ್ಚು ಮಂಡಿಸಿದರು. ಪಂಚಾಯತ್ ಅಧ್ಯಕ್ಷರು ಈ ಸಭೆಯನ್ನು ಉದೇಶಿಸಿ ಎಲ್ಲರಿಗೂ ‌ಶುಭ ಹಾರೈಸಿದರು. ಸಂಜೀವಿನಿ ಒಕ್ಕೂಟ ಕೊಡಮಾಡುವ ಸಮುದಾಯ ಬಂಡವಾಳ ನಿಧಿಯಿಂದ ಸಂಜೀವಿನಿ ಮಹಿಳೆಯರು ವಿವಿಧ ಆಹಾರೋತ್ಪನ್ನ ಚಟುವಟಿಕೆ ನಡೆಸಬೇಕು. ಆರ್ಥಿಕ ಮಟ್ಟ‌ ಏರಿಕೆಯಾಗಬೇಕು‌ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಹಿತನುಡಿದರು. ನೂತನ ಪದಾದಿಕಾರಿ ಆಯ್ಕೆ ಮಾಡಲಾಯಿತು.

ತಾಲೂಕಿನ ಸಂಪನ್ಮೂಲ ವ್ಯಕ್ತಿ( BRP- PRI) ಯಾದ ಶ್ರೀಮತಿ ಶ್ರೀಕಲಾ ಹಾಗೂ ಮಾದಕ ಮುಕ್ತ ಕರ್ನಾಟಕ ಪ್ರತಿಜ್ಞಾ ವಿಧಿಯನ್ನು ಮಾಡಿಸಿದರು. ಸಿಹೆಚ್ ಒ ಗೀತಾ ಬಿ ಲಿಂಗತ್ವಾಧಾರಿತ ದೌರ್ಜನ್ಯ, ಬಾಲ್ಯ ವಿವಾಹ , ಹೀಗೆ ಹಲವಾರು ಮಾಹಿತಿ ನೀಡಿದರು.

ವಲಯ ಮೇಲ್ವಚಾರಕಾರಾದ ಜಯಾನಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM) ಬಗ್ಗೆ ಸಂಪೂರ್ಣ ಸಮಗ್ರವಾದ ಮಾಹಿತಿಯನ್ನು ನೀಡಿದರು.ಆರ್ಥಿಕ ಸಾಕ್ಷರತೆ ಕೇಂದ್ರದ ಸಮಾಲೋಚಕಿ‌ ಉಷಾ ಕಾಮತ್ ಇನ್ಸೂರೆನ್ಸ್ ಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು‌ ಹಾಗೂ‌ ಸದಸ್ಯರು ಬೆಳೆದಿರುವ ತರಕಾರಿಗಳು, ಆಹಾರೋತ್ಪನ್ನ‌ ವಸ್ತುಗಳು, ಕೈಯಲ್ಲಿ‌ ತಯಾರಿಸಿದ ಕರಕುಶಲ ವಸ್ತುಗಳಾದ ಹೂವು ಬ್ಯಾಗ್ ಗಳನ್ನು ಪ್ರದರ್ಶನ‌ ಮಾಡಿ ಮಾರಾಟ ಮಾಡಲಾಯಿತು. ಮಹಾಸಭೆಯ ಲಕ್ಕಿ ಮಹಿಳೆ ಆಯ್ಕೆ ಮಾಡಿ‌ ಬಹುಮಾನಿತರಿಗೆ ಬಹುಮಾನ‌ ನೀಡಿ ಗೌರವಿಸಲಾಯಿತು.

ಶ್ರೀಮತಿ ಪೂರ್ಣಿಮಾ ಸ್ವಾಗತಿಸಿದರು. ತುಳಸಿ ಸಂಜೀವಿನಿ ಸಂಘದ ಸದಸ್ಯೆ ಸುನಂದ ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya
error: Content is protected !!