22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

ಬೆಳ್ತಂಗಡಿ ತಾಲೂಕಿನ ಕೃಷಿಯೇತರ ಪತ್ತಿನ ಸಹಕಾರ ಸಂಘಗಳು ಮತ್ತು ವಿವಿಧೋದ್ಧೇಶ ಸಹಕಾರ ಸಂಘಗಳ ಒಟ್ಟುಗೂಡುವಿಕೆಯಲ್ಲಿ ಭವಿಷ್ಯದಲ್ಲಿ ಭದ್ರ ಸಹಕಾರ ಸಂಘದ ಬೆಳವಣಿಗೆÀಗೆÀ ಪೂರಕವಾದ ನಿಯಮಗಳನ್ನು ಜಾರಿಗೊಳಿಸಬೇಕೆನ್ನುವ ಸದುದ್ದೇಶವನ್ನು ಇಟ್ಟುಕೊಂಡು ಪ್ರಾರಂಭಗೊAಡಿರುವ ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಬೆಳ್ತಂಗಡಿ ತಾಲೂಕು ಇತ್ತೀಚಿಗೆ ಸಹಕಾರ ಸಂಘಗಳ ಕಾಯ್ದೆಗಳಿಗೆ ಮಾಡಿರುವ ತಿದ್ದುಪಡಿಯಿಂದ ಉಂಟಾಗುವ ಪರಿಣಾಮಗಳ ಕುರಿತಾದ ಸಭೆಯು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಸೆ.೨೩ ರಂದು ನಡೆಯಿತು. ಹಿತರಕ್ಷಣಾ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ ಇವರನ್ನು ಆಯ್ಕೆ ಮಾಡಲಾಯಿತು.


ಅಧ್ಯಕ್ಷ ಭಗೀರಥ ಜಿ ಮಾತನಾಡಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮಕ್ಕೆ ಮಾಡಿರುವ ಕೆಲವೊಂದು ತಿದ್ದುಪಡಿಗಳಿಂದ ಸಹಕಾರ ಸಂಘಗಳ ಮುಂದಿನ ಬೆಳವಣಿಗೆ ಅತ್ಯಂತ ಕಷ್ಟಕರವಾಗಿದ್ದು ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಹಿತರಕ್ಷಣಾ ವೇದಿಕೆಯ ಮುಂದಿನ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಹಿತರಕ್ಷಣಾ ವೇದಿಕೆಯ ಸದಸ್ಯ ಸಂಘಗಳಿಗೆ ಸದಸ್ಯತ್ವ ಶುಲ್ಕ ನಿಗದಿಪಡಿಸಿ ಬಾಕಿ ಉಳಿದಿರುವ ಸಹಕಾರ ಸಂಘಗಳನ್ನು ಸದಸ್ಯರನ್ನಾಗಿ ಮಾಡುವುದಾಗಿ ನಿರ್ಣಯಿಸಲಾಯಿತು. ಸದಸ್ಯ ಸಹಕಾರ ಸಂಘಗಳಿಗೆ ಸಮಸ್ಯೆಗಳು ಉಂಟಾದಾಗ ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.
ಹಿತರಕ್ಷಣಾ ವೇದಿಕೆಯ ಉಪಾಧ್ಯಾಕ್ಷ ಡಾ.ಜಯಕೀರ್ತಿ ಜೈನ್, ಕಾರ್ಯದರ್ಶಿ ಅಶ್ವಥ್ ಕುಮಾರ್, ಜೊತೆ ಕಾರ್ಯದರ್ಶಿ ಸುಜಯ್ ಶೆಟ್ಟಿ, ಹಿತರಕ್ಷಣಾ ವೇದಿಕೆಯ ಸದಸ್ಯ ಸಂಘಗಳ ಅಧ್ಯಕ್ಷರುಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

Suddi Udaya
error: Content is protected !!