23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮಂಗಳೂರಿನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಿ.ಧರ್ಮಯ್ಯ(೭೧) ಅವರು ಮಂಗಳೂರು ಬೆಂದೂರುವೆಲ್‌ನ ತಮ್ಮ ಮನೆಯಲ್ಲಿ ಸೆ.೨೪ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

ಮೂಲತಃ ಹಾಸನ ಸಕಲೇಶಪುರ ಹೊಸೂರಿನವರಾಗಿದ್ದಅವರು ಮೈಸೂರಿನಲ್ಲಿ ಎಸ್‌ ಐ ಆಗಿ ಸೇವೆ ಪ್ರಾರಂಭಿಸಿ, ಬಳಿಕ ಯಳಂದೂರು, ಚಾಮರಾಜನಗರ, ವಿರಾಜಪೇಟೆ, ಸರ್ಕಲ್‌ ಇನ್‌ಸ್ಪೆಕ್ಟರ್‌ ಆಗಿ ಬೆಳ್ತಂಗಡಿ, ಕಾರ್ಕಳ, ಉಡುಪಿ, ಬಳಿಕ ಡಿವೈಎಸ್‌ಪಿಯಾಗಿ ಕಾರ್ಯನಿರ್ವಹಿಸಿದರು. ನಂತರ ಬೆಂಗಳೂರಿನಲ್ಲಿ ಎಸಿಪಿಯಾಗಿ ಮತ್ತೆ ಮಂಗಳೂರಿನಲ್ಲಿ ಡಿಸಿಪಿ(ಅಪರಾಧ-ಸಂಚಾರ) ವಿಭಾಗದಲ್ಲಿ ಸೇವೆ ಸಲ್ಲಿಸಿ, ೨೦೧೩ರಲ್ಲಿ ಸೇವಾ ನಿವೃತ್ತರಾಗಿದ್ದರು. ನಿವೃತ್ತರಾಗಿ ಮಂಗಳೂರಿನಲ್ಲೇ ನೆಲೆಸಿದ್ದರು.ಅವರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು, ನಾಲ್ಕು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya
error: Content is protected !!