22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮಂಗಳೂರಿನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಿ.ಧರ್ಮಯ್ಯ(೭೧) ಅವರು ಮಂಗಳೂರು ಬೆಂದೂರುವೆಲ್‌ನ ತಮ್ಮ ಮನೆಯಲ್ಲಿ ಸೆ.೨೪ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

ಮೂಲತಃ ಹಾಸನ ಸಕಲೇಶಪುರ ಹೊಸೂರಿನವರಾಗಿದ್ದಅವರು ಮೈಸೂರಿನಲ್ಲಿ ಎಸ್‌ ಐ ಆಗಿ ಸೇವೆ ಪ್ರಾರಂಭಿಸಿ, ಬಳಿಕ ಯಳಂದೂರು, ಚಾಮರಾಜನಗರ, ವಿರಾಜಪೇಟೆ, ಸರ್ಕಲ್‌ ಇನ್‌ಸ್ಪೆಕ್ಟರ್‌ ಆಗಿ ಬೆಳ್ತಂಗಡಿ, ಕಾರ್ಕಳ, ಉಡುಪಿ, ಬಳಿಕ ಡಿವೈಎಸ್‌ಪಿಯಾಗಿ ಕಾರ್ಯನಿರ್ವಹಿಸಿದರು. ನಂತರ ಬೆಂಗಳೂರಿನಲ್ಲಿ ಎಸಿಪಿಯಾಗಿ ಮತ್ತೆ ಮಂಗಳೂರಿನಲ್ಲಿ ಡಿಸಿಪಿ(ಅಪರಾಧ-ಸಂಚಾರ) ವಿಭಾಗದಲ್ಲಿ ಸೇವೆ ಸಲ್ಲಿಸಿ, ೨೦೧೩ರಲ್ಲಿ ಸೇವಾ ನಿವೃತ್ತರಾಗಿದ್ದರು. ನಿವೃತ್ತರಾಗಿ ಮಂಗಳೂರಿನಲ್ಲೇ ನೆಲೆಸಿದ್ದರು.ಅವರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು, ನಾಲ್ಕು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya
error: Content is protected !!