23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

ಬೆಳ್ತಂಗಡಿ ತಾಲೂಕಿನ ಕೃಷಿಯೇತರ ಪತ್ತಿನ ಸಹಕಾರ ಸಂಘಗಳು ಮತ್ತು ವಿವಿಧೋದ್ಧೇಶ ಸಹಕಾರ ಸಂಘಗಳ ಒಟ್ಟುಗೂಡುವಿಕೆಯಲ್ಲಿ ಭವಿಷ್ಯದಲ್ಲಿ ಭದ್ರ ಸಹಕಾರ ಸಂಘದ ಬೆಳವಣಿಗೆÀಗೆÀ ಪೂರಕವಾದ ನಿಯಮಗಳನ್ನು ಜಾರಿಗೊಳಿಸಬೇಕೆನ್ನುವ ಸದುದ್ದೇಶವನ್ನು ಇಟ್ಟುಕೊಂಡು ಪ್ರಾರಂಭಗೊAಡಿರುವ ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಬೆಳ್ತಂಗಡಿ ತಾಲೂಕು ಇತ್ತೀಚಿಗೆ ಸಹಕಾರ ಸಂಘಗಳ ಕಾಯ್ದೆಗಳಿಗೆ ಮಾಡಿರುವ ತಿದ್ದುಪಡಿಯಿಂದ ಉಂಟಾಗುವ ಪರಿಣಾಮಗಳ ಕುರಿತಾದ ಸಭೆಯು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಸೆ.೨೩ ರಂದು ನಡೆಯಿತು. ಹಿತರಕ್ಷಣಾ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ ಇವರನ್ನು ಆಯ್ಕೆ ಮಾಡಲಾಯಿತು.


ಅಧ್ಯಕ್ಷ ಭಗೀರಥ ಜಿ ಮಾತನಾಡಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮಕ್ಕೆ ಮಾಡಿರುವ ಕೆಲವೊಂದು ತಿದ್ದುಪಡಿಗಳಿಂದ ಸಹಕಾರ ಸಂಘಗಳ ಮುಂದಿನ ಬೆಳವಣಿಗೆ ಅತ್ಯಂತ ಕಷ್ಟಕರವಾಗಿದ್ದು ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಹಿತರಕ್ಷಣಾ ವೇದಿಕೆಯ ಮುಂದಿನ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಹಿತರಕ್ಷಣಾ ವೇದಿಕೆಯ ಸದಸ್ಯ ಸಂಘಗಳಿಗೆ ಸದಸ್ಯತ್ವ ಶುಲ್ಕ ನಿಗದಿಪಡಿಸಿ ಬಾಕಿ ಉಳಿದಿರುವ ಸಹಕಾರ ಸಂಘಗಳನ್ನು ಸದಸ್ಯರನ್ನಾಗಿ ಮಾಡುವುದಾಗಿ ನಿರ್ಣಯಿಸಲಾಯಿತು. ಸದಸ್ಯ ಸಹಕಾರ ಸಂಘಗಳಿಗೆ ಸಮಸ್ಯೆಗಳು ಉಂಟಾದಾಗ ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.
ಹಿತರಕ್ಷಣಾ ವೇದಿಕೆಯ ಉಪಾಧ್ಯಾಕ್ಷ ಡಾ.ಜಯಕೀರ್ತಿ ಜೈನ್, ಕಾರ್ಯದರ್ಶಿ ಅಶ್ವಥ್ ಕುಮಾರ್, ಜೊತೆ ಕಾರ್ಯದರ್ಶಿ ಸುಜಯ್ ಶೆಟ್ಟಿ, ಹಿತರಕ್ಷಣಾ ವೇದಿಕೆಯ ಸದಸ್ಯ ಸಂಘಗಳ ಅಧ್ಯಕ್ಷರುಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!