September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

ಬೆಳ್ತಂಗಡಿ ತಾಲೂಕಿನ ಕೃಷಿಯೇತರ ಪತ್ತಿನ ಸಹಕಾರ ಸಂಘಗಳು ಮತ್ತು ವಿವಿಧೋದ್ಧೇಶ ಸಹಕಾರ ಸಂಘಗಳ ಒಟ್ಟುಗೂಡುವಿಕೆಯಲ್ಲಿ ಭವಿಷ್ಯದಲ್ಲಿ ಭದ್ರ ಸಹಕಾರ ಸಂಘದ ಬೆಳವಣಿಗೆÀಗೆÀ ಪೂರಕವಾದ ನಿಯಮಗಳನ್ನು ಜಾರಿಗೊಳಿಸಬೇಕೆನ್ನುವ ಸದುದ್ದೇಶವನ್ನು ಇಟ್ಟುಕೊಂಡು ಪ್ರಾರಂಭಗೊAಡಿರುವ ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಬೆಳ್ತಂಗಡಿ ತಾಲೂಕು ಇತ್ತೀಚಿಗೆ ಸಹಕಾರ ಸಂಘಗಳ ಕಾಯ್ದೆಗಳಿಗೆ ಮಾಡಿರುವ ತಿದ್ದುಪಡಿಯಿಂದ ಉಂಟಾಗುವ ಪರಿಣಾಮಗಳ ಕುರಿತಾದ ಸಭೆಯು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಸೆ.೨೩ ರಂದು ನಡೆಯಿತು. ಹಿತರಕ್ಷಣಾ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ ಇವರನ್ನು ಆಯ್ಕೆ ಮಾಡಲಾಯಿತು.


ಅಧ್ಯಕ್ಷ ಭಗೀರಥ ಜಿ ಮಾತನಾಡಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮಕ್ಕೆ ಮಾಡಿರುವ ಕೆಲವೊಂದು ತಿದ್ದುಪಡಿಗಳಿಂದ ಸಹಕಾರ ಸಂಘಗಳ ಮುಂದಿನ ಬೆಳವಣಿಗೆ ಅತ್ಯಂತ ಕಷ್ಟಕರವಾಗಿದ್ದು ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಹಿತರಕ್ಷಣಾ ವೇದಿಕೆಯ ಮುಂದಿನ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಹಿತರಕ್ಷಣಾ ವೇದಿಕೆಯ ಸದಸ್ಯ ಸಂಘಗಳಿಗೆ ಸದಸ್ಯತ್ವ ಶುಲ್ಕ ನಿಗದಿಪಡಿಸಿ ಬಾಕಿ ಉಳಿದಿರುವ ಸಹಕಾರ ಸಂಘಗಳನ್ನು ಸದಸ್ಯರನ್ನಾಗಿ ಮಾಡುವುದಾಗಿ ನಿರ್ಣಯಿಸಲಾಯಿತು. ಸದಸ್ಯ ಸಹಕಾರ ಸಂಘಗಳಿಗೆ ಸಮಸ್ಯೆಗಳು ಉಂಟಾದಾಗ ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.
ಹಿತರಕ್ಷಣಾ ವೇದಿಕೆಯ ಉಪಾಧ್ಯಾಕ್ಷ ಡಾ.ಜಯಕೀರ್ತಿ ಜೈನ್, ಕಾರ್ಯದರ್ಶಿ ಅಶ್ವಥ್ ಕುಮಾರ್, ಜೊತೆ ಕಾರ್ಯದರ್ಶಿ ಸುಜಯ್ ಶೆಟ್ಟಿ, ಹಿತರಕ್ಷಣಾ ವೇದಿಕೆಯ ಸದಸ್ಯ ಸಂಘಗಳ ಅಧ್ಯಕ್ಷರುಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!