September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮಂಗಳೂರಿನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಿ.ಧರ್ಮಯ್ಯ(೭೧) ಅವರು ಮಂಗಳೂರು ಬೆಂದೂರುವೆಲ್‌ನ ತಮ್ಮ ಮನೆಯಲ್ಲಿ ಸೆ.೨೪ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

ಮೂಲತಃ ಹಾಸನ ಸಕಲೇಶಪುರ ಹೊಸೂರಿನವರಾಗಿದ್ದಅವರು ಮೈಸೂರಿನಲ್ಲಿ ಎಸ್‌ ಐ ಆಗಿ ಸೇವೆ ಪ್ರಾರಂಭಿಸಿ, ಬಳಿಕ ಯಳಂದೂರು, ಚಾಮರಾಜನಗರ, ವಿರಾಜಪೇಟೆ, ಸರ್ಕಲ್‌ ಇನ್‌ಸ್ಪೆಕ್ಟರ್‌ ಆಗಿ ಬೆಳ್ತಂಗಡಿ, ಕಾರ್ಕಳ, ಉಡುಪಿ, ಬಳಿಕ ಡಿವೈಎಸ್‌ಪಿಯಾಗಿ ಕಾರ್ಯನಿರ್ವಹಿಸಿದರು. ನಂತರ ಬೆಂಗಳೂರಿನಲ್ಲಿ ಎಸಿಪಿಯಾಗಿ ಮತ್ತೆ ಮಂಗಳೂರಿನಲ್ಲಿ ಡಿಸಿಪಿ(ಅಪರಾಧ-ಸಂಚಾರ) ವಿಭಾಗದಲ್ಲಿ ಸೇವೆ ಸಲ್ಲಿಸಿ, ೨೦೧೩ರಲ್ಲಿ ಸೇವಾ ನಿವೃತ್ತರಾಗಿದ್ದರು. ನಿವೃತ್ತರಾಗಿ ಮಂಗಳೂರಿನಲ್ಲೇ ನೆಲೆಸಿದ್ದರು.ಅವರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು, ನಾಲ್ಕು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ನಿಡ್ಲೆ : ಪೊಂರ್ದಿಲ ಎಂಬಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya
error: Content is protected !!