22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮಂಗಳೂರಿನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಿ.ಧರ್ಮಯ್ಯ(೭೧) ಅವರು ಮಂಗಳೂರು ಬೆಂದೂರುವೆಲ್‌ನ ತಮ್ಮ ಮನೆಯಲ್ಲಿ ಸೆ.೨೪ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು.

ಮೂಲತಃ ಹಾಸನ ಸಕಲೇಶಪುರ ಹೊಸೂರಿನವರಾಗಿದ್ದಅವರು ಮೈಸೂರಿನಲ್ಲಿ ಎಸ್‌ ಐ ಆಗಿ ಸೇವೆ ಪ್ರಾರಂಭಿಸಿ, ಬಳಿಕ ಯಳಂದೂರು, ಚಾಮರಾಜನಗರ, ವಿರಾಜಪೇಟೆ, ಸರ್ಕಲ್‌ ಇನ್‌ಸ್ಪೆಕ್ಟರ್‌ ಆಗಿ ಬೆಳ್ತಂಗಡಿ, ಕಾರ್ಕಳ, ಉಡುಪಿ, ಬಳಿಕ ಡಿವೈಎಸ್‌ಪಿಯಾಗಿ ಕಾರ್ಯನಿರ್ವಹಿಸಿದರು. ನಂತರ ಬೆಂಗಳೂರಿನಲ್ಲಿ ಎಸಿಪಿಯಾಗಿ ಮತ್ತೆ ಮಂಗಳೂರಿನಲ್ಲಿ ಡಿಸಿಪಿ(ಅಪರಾಧ-ಸಂಚಾರ) ವಿಭಾಗದಲ್ಲಿ ಸೇವೆ ಸಲ್ಲಿಸಿ, ೨೦೧೩ರಲ್ಲಿ ಸೇವಾ ನಿವೃತ್ತರಾಗಿದ್ದರು. ನಿವೃತ್ತರಾಗಿ ಮಂಗಳೂರಿನಲ್ಲೇ ನೆಲೆಸಿದ್ದರು.ಅವರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು, ನಾಲ್ಕು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

Suddi Udaya

ಹದಗೆಟ್ಟಿರುವ ಸುಲ್ಕೇರಿಯ ದೇರಂಡೋಡಿ ಮತ್ತು ದೇವರಗುಡ್ಡೆ ರಸ್ತೆ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya
error: Content is protected !!