July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಯುವ ವಿದ್ಯಾರ್ಥಿಗಳು ಯೌವ್ವನದ ಹುರುಪಿನಿಂದ ನಿಯಮ ಬಾಹಿರವಾಗಿ ನಡೆದುಕೊಳ್ಳುವುದರಿಂದ ಪ್ರಾಣಾಪಾಯ ಉಂಟಾಗಬಹುದು ಎಂದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನಿಂಗಪ್ಪ ಡಿ. ಚನ್ನಣ್ಣವರ್ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುತ್ತಾ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಅತೀ ಅವಶ್ಯಕ. ಟ್ರಾಫಿಕ್ ಸಿಗ್ನಲ್ ಗಳು, ಜೀಬ್ರಾ ಕ್ರಾಸಿಂಗ್ ಮುಂತಾದ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನ ಚಲಾಯಿಸುವವರು ನಿರ್ದಿಷ್ಟ ದಾಖಲೆಗಳನ್ನು ಹೊಂದಿರಬೇಕು. ಅಲ್ಲದೆ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿಯನ್ನು ಹೊಂದಿರಬೇಕು. ಅಜ್ಞಾತ ಮೆಸೇಜ್, ಇಮೇಲ್, ಲಿಂಕ್ ಗಳಿಗೆ ಸ್ಪಂದನೆ ನೀಡಬಾರದು ಎಂದರು.
ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು.


ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಸ್ವಾಗತಿಸಿದರು. ಸಹಕಾರ್ಯಕ್ರಮಾಧಿಕಾರಿ ಶ್ರಾವ್ಯ ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya
error: Content is protected !!