September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಮಲವಂತಿಗೆ ಗ್ರಾಮ ಪಂಚಾಯತ್ ಮಟ್ಟದ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ)ಇದರ ಮಹಾಸಭೆಯನ್ನು ಸೆ.24 ರಂದು ಮಲವಂತಿಗೆ ಶಾಲಾ ವಠಾರದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕೃಪಾ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರು ವಲಯಮೇಲ್ವಿಚಾರಕರು ಹಾಗೂ ಎಲ್ಲಾ ಗಣ್ಯರು ಸಭಾ ಕಾರ್ಯಕ್ರಮ ವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಸ್ವಚ್ಛತಾ ಸಿಬ್ಬಂದಿ ರೇವತಿ ಮತ್ತು ಸಮುದಾಯ ಬಂಡವಾಳ ನಿಧಿ ಸಾಲ ಪಡೆದು ಹೈನುಗಾರಿಕೆ ನಡೆಸಿ ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದಿದ ನಾಗಮ್ಮ ಇವರನ್ನು ಒಕ್ಕೂಟದ ವತಿಯಿಂದ ಅಭಿನಂದಿಸಲಾಯಿ‌ತು.

ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆಯ ಉದ್ದೇಶ ಮತ್ತು ಮಹಿಳೆಯರು ಸ್ವಉದ್ಯೋಗ ಮಾಡಿ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಡೆಸಬೇಕು ಮತ್ತು ಮಹಿಳೆಯರಿಗೆ ಸಿಗುವಂತಹ ಸರ್ಕಾರದ ಯೋಜನೆಗಳ ಬಗ್ಗೆ ವಿವರಿಸಿ ಎಲ್ಲರನ್ನು ಶುಭ ಹಾರೈಸಿದರು. ಸಭೆಯಲ್ಲಿ ಸಂಜೀವಿನಿ ಧ್ಯೇಯ ಗೀತೆ ಹಾಡಲಾಯಿತು. ಅದೃಷ್ಟ ಮಹಿಳೆ ಎಂಬ ಆಟ ನಡೆಸಿ ಬಹುಮಾನ ವಿತರಿಸಲಾಯಿತು. ಹೊಸದಾಗಿ ರಚನೆಯಾದ ಸಂಘದ ಸದಸ್ಯರನ್ನು ಹೂವು ನೀಡುವುದರ ಮೂಲಕ ಒಕ್ಕೂಟಕ್ಕೆ ಸ್ವಾಗತಿಸಲಾಯಿತು.ಸಿಹೆಚ್ ಒ ರಮ್ಯಾ ಲಿಂಗತ್ವ ಆಧಾರಿತ ಮಾಹಿತಿ ಮತ್ತು ಆರೋಗ್ಯದ ಬಗೆಗಿನ ಮಾಹಿತಿಯನ್ನು ಉತ್ತಮ ರೀತಿಯಲ್ಲಿ ನೀಡಿದರು.

ವಿನೋದ ಸ್ವಾಗತಿಸಿದರು. ಕೃಷಿ ಸಖಿ ಹೇಮಾವತಿ 2024-25 ರ ವಾರ್ಷಿಕ ವರದಿಯನ್ನು, ರೇಖಾ ನಿರೂಪಿಸಿ ಜಮಾ ಮತ್ತು ಖರ್ಚು ಮಂಡಿಸಿದರು. ಪೂರ್ಣಿಮಾ ಅವರು ಧನ್ಯವಾದವಿತ್ತರು.

Related posts

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya
error: Content is protected !!